<p><strong>ಉಡುಪಿ:</strong> ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಕೋವಿಡ್ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈನಿಂದ ರಾಜ್ಯಕ್ಕೆ ಬಂದವರಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಬದಲು 14 ದಿನಗಳ ಕಟ್ಟುನಿಟ್ಟಿನ ಹೋಂ ಕ್ವಾರಂಟೈನ್ಗೆ ಸರ್ಕಾರ ನಿರ್ಧರಿಸಿದೆ ಎಂದರು.</p>.<p>ಹೋಂ ಕ್ವಾರಂಟೈನ್ಗೆ ಒಳಗಾದವರ ಮನೆಗಳನ್ನು ಸೀಲ್ ಮಾಡಿ, ಅಕ್ಕಪಕ್ಕದ ಮನೆಗಳಿಗೆ ತಿಳಿವಳಿಕೆ ನೋಟಿಸ್ ನೀಡಲಾಗುವುದು. ಹೋಂ ಕ್ವಾರಂಟೈನ್ ಮೇಲೆ ನಿಗಾ ಇರಿಸಲು ಅಧಿಕಾರಿಗಳ ಸಮಿತಿ ನೇಮಕ ಮಾಡಲಾಗಿದೆ ಎಂದರು.</p>.<p><strong>ಕೋವಿಡ್ ಬಳಿಕ ಮೇಲ್ದರ್ಜೆಗೆ:</strong>ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ಗಳಿಗೆ ಮೇಲ್ದರ್ಜೆಗೇರಿಸುವ ವಿಚಾರ ಸಭೆಯಲ್ಲಿ ಚರ್ಚೆಯಾಗಿದ್ದು, ಕೋವಿಡ್ ಸೋಂಕು ಇಳಿಮುಖವಾದ ಕೂಡಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚಿಸಲಾಗಿದೆ. ವರದಿ ಬಂದ ಬಳಿಕ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.</p>.<p><strong>ಪ್ರತ್ಯೇಕ ಸಭೆ:</strong>ಬಿಆರ್ಎಸ್ ಸಂಸ್ಥೆ 6 ತಜ್ಞ ವೈದ್ಯರನ್ನು ನೀಡುವಂತೆ ಸರ್ಕಾರಕ್ಕೆ ಮನವಿ ನೀಡಿತ್ತು. ಅದರಂತೆ ತಜ್ಞ ವೈದ್ಯರನ್ನು ನೀಡಲಾಗಿದೆ. ಇತರೆ ಬೇಡಿಕೆಗಳ ಈಡೇರಿಕೆ ಸಂಬಂಧ ಶೀಘ್ರದಲ್ಲೇ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಕೋವಿಡ್ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈನಿಂದ ರಾಜ್ಯಕ್ಕೆ ಬಂದವರಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಬದಲು 14 ದಿನಗಳ ಕಟ್ಟುನಿಟ್ಟಿನ ಹೋಂ ಕ್ವಾರಂಟೈನ್ಗೆ ಸರ್ಕಾರ ನಿರ್ಧರಿಸಿದೆ ಎಂದರು.</p>.<p>ಹೋಂ ಕ್ವಾರಂಟೈನ್ಗೆ ಒಳಗಾದವರ ಮನೆಗಳನ್ನು ಸೀಲ್ ಮಾಡಿ, ಅಕ್ಕಪಕ್ಕದ ಮನೆಗಳಿಗೆ ತಿಳಿವಳಿಕೆ ನೋಟಿಸ್ ನೀಡಲಾಗುವುದು. ಹೋಂ ಕ್ವಾರಂಟೈನ್ ಮೇಲೆ ನಿಗಾ ಇರಿಸಲು ಅಧಿಕಾರಿಗಳ ಸಮಿತಿ ನೇಮಕ ಮಾಡಲಾಗಿದೆ ಎಂದರು.</p>.<p><strong>ಕೋವಿಡ್ ಬಳಿಕ ಮೇಲ್ದರ್ಜೆಗೆ:</strong>ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ಗಳಿಗೆ ಮೇಲ್ದರ್ಜೆಗೇರಿಸುವ ವಿಚಾರ ಸಭೆಯಲ್ಲಿ ಚರ್ಚೆಯಾಗಿದ್ದು, ಕೋವಿಡ್ ಸೋಂಕು ಇಳಿಮುಖವಾದ ಕೂಡಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚಿಸಲಾಗಿದೆ. ವರದಿ ಬಂದ ಬಳಿಕ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.</p>.<p><strong>ಪ್ರತ್ಯೇಕ ಸಭೆ:</strong>ಬಿಆರ್ಎಸ್ ಸಂಸ್ಥೆ 6 ತಜ್ಞ ವೈದ್ಯರನ್ನು ನೀಡುವಂತೆ ಸರ್ಕಾರಕ್ಕೆ ಮನವಿ ನೀಡಿತ್ತು. ಅದರಂತೆ ತಜ್ಞ ವೈದ್ಯರನ್ನು ನೀಡಲಾಗಿದೆ. ಇತರೆ ಬೇಡಿಕೆಗಳ ಈಡೇರಿಕೆ ಸಂಬಂಧ ಶೀಘ್ರದಲ್ಲೇ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>