ಬಳಿಕ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕೆಸರುಗದ್ದೆಯಲ್ಲಿ ಓಟ, ರಿಲೇ, ಹಗ್ಗ ಜಗ್ಗಾಟ, ನಿಧಿಶೋಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ನೀಡಲಾಯಿತು. ಎರ್ಮಾಳು ಮೂಡುಬೆಟ್ಟು ಜಗನ್ನಾಥ ಶೆಟ್ಟಿ, ಎರ್ಮಾಳು ಗ್ರಾಮ ಪಂಚಾಯಿತಿ ಸದಸ್ಯೆ ಶಕುಂತಲಾ ಪೂಜಾರಿ, ಆದರ್ಶ ಯುವಕ ಮಂಡಲ ಅಧ್ಯಕ್ಷೆ ಪ್ರೇಮಾ ಆರ್.ಸಾಲ್ಯಾನ್, ಯೋಗ ಶಿಕ್ಷಕಿ ಶಾಮಲಾ ಆರ್.ರಾವ್ ಇದ್ದರು.