<p><strong>ಉಡುಪಿ: </strong>ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಬಿರುಸಿನ ಮಳೆ ಸುರಿಯುತ್ತಿದೆ. ಕುಂದಾಪುರ, ಕಾರ್ಕಳ, ಬೈಂದೂರು, ಹೆಬ್ರಿ, ಬ್ರಹ್ಮಾವರ, ಕಾಪು ಹಾಗೂ ಉಡುಪಿಯಲ್ಲಿ ವರುಣ ಅಬ್ಬರಿಸಿದ್ದಾನೆ.</p>.<p>ಶುಕ್ರವಾರ ದಿನವಿಡೀ ಮೋಡಕವಿದ ವಾತಾವರಣವಿತ್ತು. ಗಾಳಿಯ ಅಬ್ಬರದೊಂದಿಗೆ ಎಡೆಬಿಡದೆ ಮಳೆ ಸುರಿಯಿತು. ಕಾಪು ತಾಲ್ಲೂಕಿನ ಮೂಡಬೆಟ್ಟು, ಕಾರ್ಕಳ ತಾಲ್ಲೂಕಿನ ಎಳ್ಳಾರೆ ಗ್ರಾಮದಲ್ಲಿ ಮರಬಿದ್ದು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಳ್ಳ, ಚಿಕ್ಕ ನದಿಗಳು ತುಂಬಿ ಹರಿಯುತ್ತಿವೆ.</p>.<p>ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ. ಅಲೆಗಳ ಹೊಡೆತಕ್ಕೆ ಅಲ್ಲಲ್ಲಿ ಕಡಲ್ಕೊರೆತ ಉಂಟಾಗುತ್ತಿದೆ.</p>.<p>ಕಳೆದ 24 ಗಂಟೆಗಳಲ್ಲಿ ಉಡುಪಿಯಲ್ಲಿ 24, ಕುಂದಾಪುರ 21, ಕಾರ್ಕಳ 18, ಬೈಂದೂರು 38, ಬ್ರಹ್ಮಾವರ 16, ಕಾಪು 17, ಹೆಬ್ರಿಯಲ್ಲಿ 28 ಮಿ.ಮೀ ಮಳೆಯಾಗಿದೆ. ಮೂರ್ನಾಲ್ಕು ದಿನ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p><strong>ಕೃಷಿ ಚಟುವಟಿಕೆ ಬಿರುಸು:</strong></p>.<p>ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ರೈತರು ಗದ್ದೆಗಳನ್ನು ಬಿತ್ತನೆಗೆ ಹಸನು ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಕೊರೊನಾದಿಂದ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಲ್ಲಿ ದುಡಿಯುತ್ತಿದ್ದರು ಜಿಲ್ಲೆಗೆ ಮರಳಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವರ್ಷ ಭತ್ತದ ಬಿತ್ತನೆ ಬೀಜಕ್ಕೆ ವಿಪರೀತ ಬೇಡಿಕೆ ಸೃಷ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಬಿರುಸಿನ ಮಳೆ ಸುರಿಯುತ್ತಿದೆ. ಕುಂದಾಪುರ, ಕಾರ್ಕಳ, ಬೈಂದೂರು, ಹೆಬ್ರಿ, ಬ್ರಹ್ಮಾವರ, ಕಾಪು ಹಾಗೂ ಉಡುಪಿಯಲ್ಲಿ ವರುಣ ಅಬ್ಬರಿಸಿದ್ದಾನೆ.</p>.<p>ಶುಕ್ರವಾರ ದಿನವಿಡೀ ಮೋಡಕವಿದ ವಾತಾವರಣವಿತ್ತು. ಗಾಳಿಯ ಅಬ್ಬರದೊಂದಿಗೆ ಎಡೆಬಿಡದೆ ಮಳೆ ಸುರಿಯಿತು. ಕಾಪು ತಾಲ್ಲೂಕಿನ ಮೂಡಬೆಟ್ಟು, ಕಾರ್ಕಳ ತಾಲ್ಲೂಕಿನ ಎಳ್ಳಾರೆ ಗ್ರಾಮದಲ್ಲಿ ಮರಬಿದ್ದು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಳ್ಳ, ಚಿಕ್ಕ ನದಿಗಳು ತುಂಬಿ ಹರಿಯುತ್ತಿವೆ.</p>.<p>ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ. ಅಲೆಗಳ ಹೊಡೆತಕ್ಕೆ ಅಲ್ಲಲ್ಲಿ ಕಡಲ್ಕೊರೆತ ಉಂಟಾಗುತ್ತಿದೆ.</p>.<p>ಕಳೆದ 24 ಗಂಟೆಗಳಲ್ಲಿ ಉಡುಪಿಯಲ್ಲಿ 24, ಕುಂದಾಪುರ 21, ಕಾರ್ಕಳ 18, ಬೈಂದೂರು 38, ಬ್ರಹ್ಮಾವರ 16, ಕಾಪು 17, ಹೆಬ್ರಿಯಲ್ಲಿ 28 ಮಿ.ಮೀ ಮಳೆಯಾಗಿದೆ. ಮೂರ್ನಾಲ್ಕು ದಿನ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p><strong>ಕೃಷಿ ಚಟುವಟಿಕೆ ಬಿರುಸು:</strong></p>.<p>ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ರೈತರು ಗದ್ದೆಗಳನ್ನು ಬಿತ್ತನೆಗೆ ಹಸನು ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಕೊರೊನಾದಿಂದ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಲ್ಲಿ ದುಡಿಯುತ್ತಿದ್ದರು ಜಿಲ್ಲೆಗೆ ಮರಳಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವರ್ಷ ಭತ್ತದ ಬಿತ್ತನೆ ಬೀಜಕ್ಕೆ ವಿಪರೀತ ಬೇಡಿಕೆ ಸೃಷ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>