<p><strong>ಉಡುಪಿ</strong>: ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ತೂಫಾನ್ನಿಂದಾಗಿ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ದೋಣಿಗಳು ಮಲ್ಪೆ ಬಂದರಿನಲ್ಲಿ ಮತ್ತೆ ಲಂಗರು ಹಾಕಿವೆ.</p>.<p>ಮಲ್ಪೆ ಬಂದರು ಮಾತ್ರವಲ್ಲದೆ ಬಾಪುತೋಟದ ಬಳಿ ಹೊಳೆಯಲ್ಲಿ ಮೀನುಗಾರಿಕಾ ದೋಣಿಗಳನ್ನು ನಿಲ್ಲಿಸಲಾಗಿದೆ. ಈ ಬಾರಿ ಋತು ಆರಂಭದಲ್ಲೇ ಹವಾಮಾನ ವೈಪರೀತ್ಯದಿಂದಾಗಿ ಮೀನುಗಾರರಿಗೆ ನಷ್ಟ ಉಂಟಾಗಿತ್ತು. ಪದೇ ಪದೇ ತೂಫಾನ್ನಿಂದಾಗಿ ಆಳಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆ ಮೀನುಗಾರರು ಸಂಕಷ್ಟದಲ್ಲಿದ್ದಾರೆ.</p>.<p>ಟ್ರಾಲಿಂಗ್ ನಿಷೇಧ ತೆರವಾಗಿ ಇನ್ನೇನು ದೋಣಿಗಳು ಸಮುದ್ರಕ್ಕಿಳಿಯಲು ಸಿದ್ಧವಾಗಿದ್ದಾಗ ಚಂಡಮಾರುತದ ಪರಿಣಾಮವಾಗಿ ಗಾಳಿ, ಮಳೆಯಿಂದಾಗಿ ದೋಣಿಗಳು ಬಂದರಿನಲ್ಲೇ ಉಳಿದುಕೊಂಡಿದ್ದವು.</p>.<p>ಆಗಸ್ಟ್ ತಿಂಗಳಲ್ಲಿ ಕೆಲ ದಿನಗಳಲ್ಲಷ್ಟೇ ಮೀನುಗಾರಿಕೆ ನಡೆದಿತ್ತು. ಸೆಪ್ಟೆಂಬರ್ನಲ್ಲೂ ಆಗಾಗ ತೂಫಾನ್ನಿಂದಾಗಿ ಮೀನುಗಾರಿಕೆ ಸ್ಥಗಿತವಾಗಿತ್ತು. ಈ ತಿಂಗಳಲ್ಲಿ ಮತ್ತೆ ಮಳೆ, ಗಾಳಿ ಆರಂಭವಾಗಿರುವುದರಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತಾಗಿದೆ ಎಂದು ಮೀನುಗಾರರು ತಿಳಿಸಿದರು.</p>.<p>ಕಳೆದ ವರ್ಷದ ಮೀನುಗಾರಿಕಾ ಋತುವಿಗೆ ಹೋಲಿಸಿದರೆ ಈ ಬಾರಿ ಆರಂಭದಲ್ಲಿ ಸಿಗಡಿ, ಬೂತಾಯಿ ಮೀನುಗಳು ಕೆಲ ದೋಣಿಯವರಿಗೆ ಸಾಕಷ್ಟು ಸಿಕ್ಕಿದ್ದವು. ಕಡಲಿನಲ್ಲಿ ಮೀನು ಇದ್ದರೂ ಹಿಡಿಯಲು ಸಾಧ್ಯವಾಗದ ಸ್ಥಿತಿ ಇದೆ ಎಂದೂ ಹೇಳಿದರು.</p>.<p>ಸಾಮಾನ್ಯವಾಗಿ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಉತ್ತಮವಾಗಿ ಮೀನುಗಾರಿಕೆ ನಡೆಯುತ್ತದೆ ಆದರೆ ಹವಾಮಾನ ವೈಪರೀತ್ಯದಿಂದಾಗಿ ಈ ಸಲ ಸಮರ್ಪಕವಾಗಿ ಮೀನುಗಾರಿಕೆ ನಡೆದಿಲ್ಲ ಎನ್ನುತ್ತಾರೆ ಮೀನುಗಾರರು.</p>.<p> <strong>‘ನಿರೀಕ್ಷಿತ ಪ್ರಮಾಣದಲ್ಲಿ ಸಿಗದ ಮೀನು’ </strong></p><p>‘ಈ ಬಾರಿ ಆರಂಭದಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಬಹುತೇಕ ದೋಣಿಗಳು ಸಮುದ್ರಕ್ಕಿಳಿದಿರಲಿಲ್ಲ. ಈಗ ಹೊರ ರಾಜ್ಯದ ಕಾರ್ಮಿಕರು ಮರಳಿ ಬಂದಿದ್ದಾರೆ. ಆದರೆ ತೂಫಾನ್ನಿಂದಾಗಿ ಮೀನುಗಾರಿಕೆಗೆ ತೆರಳಲಾರದ ಪರಿಸ್ಥಿತಿ ಇದೆ’ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರ ತಿಳಿಸಿದರು. </p><p>‘ಮೀನುಗಾರಿಕೆಗೆ ತೆರಳುವ ದೋಣಿಗಳಿಗೂ ಬಂಗುಡೆ ಮೀನು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಸಿಕ್ಕಿದೆ. ಕೆಲವು ದೋಣಿಯವರಿಗೆ ಉತ್ತಮ ಮೀನುಗಾರಿಕೆಯಾದರೆ ಇನ್ನು ಕೆಲವರಿಗೆ ಮೀನುಗಳು ಸಿಗದೆ ನಷ್ಟ ಉಂಟಾಗಿದೆ. </p><p>‘ಕಳೆದ ನಾಲ್ಕೈದು ದಿನಗಳಿಂದ ತೂಫಾನ್ನಿಂದಾಗಿ ದೋಣಿಗಳು ದಡ ಸೇರಿವೆ. ಮಲ್ಪೆಯ ಕೆಲವು ದೋಣಿಗಳು ಕಾರವಾರದ ಬಂದರಿನಲ್ಲೂ ಲಂಗರು ಹಾಕಿವೆ. ಈ ಬಾರಿಯೂ ಇದುವರೆಗೆ ಉತ್ತಮ ಮೀನುಗಾರಿಕೆ ನಡೆದಿಲ್ಲ’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ತೂಫಾನ್ನಿಂದಾಗಿ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ದೋಣಿಗಳು ಮಲ್ಪೆ ಬಂದರಿನಲ್ಲಿ ಮತ್ತೆ ಲಂಗರು ಹಾಕಿವೆ.</p>.<p>ಮಲ್ಪೆ ಬಂದರು ಮಾತ್ರವಲ್ಲದೆ ಬಾಪುತೋಟದ ಬಳಿ ಹೊಳೆಯಲ್ಲಿ ಮೀನುಗಾರಿಕಾ ದೋಣಿಗಳನ್ನು ನಿಲ್ಲಿಸಲಾಗಿದೆ. ಈ ಬಾರಿ ಋತು ಆರಂಭದಲ್ಲೇ ಹವಾಮಾನ ವೈಪರೀತ್ಯದಿಂದಾಗಿ ಮೀನುಗಾರರಿಗೆ ನಷ್ಟ ಉಂಟಾಗಿತ್ತು. ಪದೇ ಪದೇ ತೂಫಾನ್ನಿಂದಾಗಿ ಆಳಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆ ಮೀನುಗಾರರು ಸಂಕಷ್ಟದಲ್ಲಿದ್ದಾರೆ.</p>.<p>ಟ್ರಾಲಿಂಗ್ ನಿಷೇಧ ತೆರವಾಗಿ ಇನ್ನೇನು ದೋಣಿಗಳು ಸಮುದ್ರಕ್ಕಿಳಿಯಲು ಸಿದ್ಧವಾಗಿದ್ದಾಗ ಚಂಡಮಾರುತದ ಪರಿಣಾಮವಾಗಿ ಗಾಳಿ, ಮಳೆಯಿಂದಾಗಿ ದೋಣಿಗಳು ಬಂದರಿನಲ್ಲೇ ಉಳಿದುಕೊಂಡಿದ್ದವು.</p>.<p>ಆಗಸ್ಟ್ ತಿಂಗಳಲ್ಲಿ ಕೆಲ ದಿನಗಳಲ್ಲಷ್ಟೇ ಮೀನುಗಾರಿಕೆ ನಡೆದಿತ್ತು. ಸೆಪ್ಟೆಂಬರ್ನಲ್ಲೂ ಆಗಾಗ ತೂಫಾನ್ನಿಂದಾಗಿ ಮೀನುಗಾರಿಕೆ ಸ್ಥಗಿತವಾಗಿತ್ತು. ಈ ತಿಂಗಳಲ್ಲಿ ಮತ್ತೆ ಮಳೆ, ಗಾಳಿ ಆರಂಭವಾಗಿರುವುದರಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತಾಗಿದೆ ಎಂದು ಮೀನುಗಾರರು ತಿಳಿಸಿದರು.</p>.<p>ಕಳೆದ ವರ್ಷದ ಮೀನುಗಾರಿಕಾ ಋತುವಿಗೆ ಹೋಲಿಸಿದರೆ ಈ ಬಾರಿ ಆರಂಭದಲ್ಲಿ ಸಿಗಡಿ, ಬೂತಾಯಿ ಮೀನುಗಳು ಕೆಲ ದೋಣಿಯವರಿಗೆ ಸಾಕಷ್ಟು ಸಿಕ್ಕಿದ್ದವು. ಕಡಲಿನಲ್ಲಿ ಮೀನು ಇದ್ದರೂ ಹಿಡಿಯಲು ಸಾಧ್ಯವಾಗದ ಸ್ಥಿತಿ ಇದೆ ಎಂದೂ ಹೇಳಿದರು.</p>.<p>ಸಾಮಾನ್ಯವಾಗಿ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಉತ್ತಮವಾಗಿ ಮೀನುಗಾರಿಕೆ ನಡೆಯುತ್ತದೆ ಆದರೆ ಹವಾಮಾನ ವೈಪರೀತ್ಯದಿಂದಾಗಿ ಈ ಸಲ ಸಮರ್ಪಕವಾಗಿ ಮೀನುಗಾರಿಕೆ ನಡೆದಿಲ್ಲ ಎನ್ನುತ್ತಾರೆ ಮೀನುಗಾರರು.</p>.<p> <strong>‘ನಿರೀಕ್ಷಿತ ಪ್ರಮಾಣದಲ್ಲಿ ಸಿಗದ ಮೀನು’ </strong></p><p>‘ಈ ಬಾರಿ ಆರಂಭದಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಬಹುತೇಕ ದೋಣಿಗಳು ಸಮುದ್ರಕ್ಕಿಳಿದಿರಲಿಲ್ಲ. ಈಗ ಹೊರ ರಾಜ್ಯದ ಕಾರ್ಮಿಕರು ಮರಳಿ ಬಂದಿದ್ದಾರೆ. ಆದರೆ ತೂಫಾನ್ನಿಂದಾಗಿ ಮೀನುಗಾರಿಕೆಗೆ ತೆರಳಲಾರದ ಪರಿಸ್ಥಿತಿ ಇದೆ’ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರ ತಿಳಿಸಿದರು. </p><p>‘ಮೀನುಗಾರಿಕೆಗೆ ತೆರಳುವ ದೋಣಿಗಳಿಗೂ ಬಂಗುಡೆ ಮೀನು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಸಿಕ್ಕಿದೆ. ಕೆಲವು ದೋಣಿಯವರಿಗೆ ಉತ್ತಮ ಮೀನುಗಾರಿಕೆಯಾದರೆ ಇನ್ನು ಕೆಲವರಿಗೆ ಮೀನುಗಳು ಸಿಗದೆ ನಷ್ಟ ಉಂಟಾಗಿದೆ. </p><p>‘ಕಳೆದ ನಾಲ್ಕೈದು ದಿನಗಳಿಂದ ತೂಫಾನ್ನಿಂದಾಗಿ ದೋಣಿಗಳು ದಡ ಸೇರಿವೆ. ಮಲ್ಪೆಯ ಕೆಲವು ದೋಣಿಗಳು ಕಾರವಾರದ ಬಂದರಿನಲ್ಲೂ ಲಂಗರು ಹಾಕಿವೆ. ಈ ಬಾರಿಯೂ ಇದುವರೆಗೆ ಉತ್ತಮ ಮೀನುಗಾರಿಕೆ ನಡೆದಿಲ್ಲ’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>