ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ | ಜಿಲ್ಲೆಯಾದ್ಯಂತ ಬಿರುಸಿನ ಮಳೆ: ಮತ್ತೆ ನೆರೆ ಹಾವಳಿ ಭೀತಿ

Published : 6 ಜುಲೈ 2024, 6:16 IST
Last Updated : 6 ಜುಲೈ 2024, 6:16 IST
ಫಾಲೋ ಮಾಡಿ
Comments
ನಾವುಂದ ಗ್ರಾಮದ ಸಾಲ್ಬುಡದಲ್ಲಿ ಜಲಾವೃತವಾಗಿರುವ ಕೃಷಿ ಗದ್ದೆಗಳು
ನಾವುಂದ ಗ್ರಾಮದ ಸಾಲ್ಬುಡದಲ್ಲಿ ಜಲಾವೃತವಾಗಿರುವ ಕೃಷಿ ಗದ್ದೆಗಳು
ಜಲಾವೃತಗೊಳ್ಳುವ ಪ್ರದೇಶಗಳ‌ ಜನರಿಗೆ ಮುನ್ಸೂಚನೆ ನೀಡಲಾಗಿದೆ. ರಕ್ಷಣಾ ತಂಡಗಳನ್ನು‌ ಜಾಗೃತ ಸ್ಥಿತಿಯಲ್ಲಿ‌ ಇರಿಸಿಕೊಳ್ಳಲಾಗಿದ್ದು ಅಗತ್ಯಬಿದ್ದಲ್ಲಿ ಗಂಜಿ‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು
ರಶ್ಮಿ ಎಸ್.ಆರ್ ಉಪವಿಭಾಗಾಧಿಕಾರಿ
ಇಂದು ಜಿಲ್ಲೆಯಾದ್ಯಂತ ಶಾಲೆ ಪಿಯು ಕಾಲೇಜುಗಳಿಗೆ ರಜೆ
ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇದೇ 6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿಯವರು  ಆದೇಶಿಸಿದ್ದಾರೆ.
ಮತ್ತೆ ಬಿರುಸು ಪಡೆದ ವರ್ಷಧಾರೆ
ಕುಂದಾಪುರ: ಕಳೆದ ನಾಲ್ಕೈದು ದಿನಗಳಿಂದ‌ ಸುರಿಯುತ್ತಿರುವ ವರ್ಷಧಾರೆ ಶುಕ್ರವಾರ ಬೆಳಿಗ್ಗೆ ಕೊಂಚ‌ ಬಿಡುವು ಪಡೆದುಕೊಂಡು ಸಂಜೆಯ ಬಳಿಕ ಮತ್ತೆ ತನ್ನ ರೌದ್ರಾವತಾರವನ್ನು ತಾಳಿದೆ. ಘಟ್ಟ ಪ್ರದೇಶದಲ್ಲಿ ಬೀಳುತ್ತಿರುವ ಮಳೆ ಹಾಗೂ ಇಲ್ಲಿ ಸುರಿಯುತ್ತಿರುವ ನೀರಿನ‌‌ ಧಾರೆಯಿಂದಾಗಿ ಕುಂದಾಪುರ   ತಾಲ್ಲೂಕಿನಲ್ಲಿ ಹರಿಯುತ್ತಿರುವ ನದಿಗಳಲ್ಲಿ ನೀರಿನ‌ ಮಟ್ಟ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ಮಳೆ ಗಾಳಿಯಿಂದಾಗಿ ಅಮಾಸೆಬೈಲು ಶಂಕರನಾರಾಯಣ ಕೋಡಿ ಮುಂತಾದ‌ ಪ್ರದೇಶಗಳಲ್ಲಿ ಮನೆಗಳಿಗೆ ಹಾಗೂ ಜಾನುವಾರು‌ ಕೊಟ್ಟಿಗೆಗಳಿಗೆ ಹಾನಿಯುಂಟಾಗಿತ್ತು. ನೆಟ್‌ವರ್ಕ್‌ ಸಮಸ್ಯೆ: ಕುಂದಾಪುರ ಬೈಂದೂರು ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ದೂರವಾಣಿ ಬಳಕೆದಾರಿಗೆ ತೊಂದರೆಯಾಗಿದೆ. ವಿದ್ಯುತ್ ಲೈನ್‌ಗಳ ದುರಸ್ತಿ‌ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ಹಗಲಿರುಳೆನ್ನದೆ ದುಡಿಯುತ್ತಿದ್ದಾರೆ. ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ‌‌ ಮಾಡಿದ್ದರಿಂದ ಬಸ್ಸುಗಳಲ್ಲಿ ವಿದ್ಯಾರ್ಥಿಗಳ‌ ಸಂಖ್ಯೆ ಇಳಿಮುಖವಾಗಿತ್ತು. ಕೆಲಹೊತ್ತು ಬಿಸಿಲು: ಶುಕ್ರವಾರ ಬೆಳಿಗ್ಗೆ  ಬಾನಿನಲ್ಲಿ‌ ಮೋಡ‌ ಮಾಯವಾಗಿ ಒಂದಷ್ಟು ಹೊತ್ತು ಸೂರ್ಯನ ಬಿಸಿಲು ಕಾಣಿಸಿದ್ದರಿಂದ ವರುಣನ‌ ಆರ್ಭಟ ಕಡಿಮೆಯಾಯಿತು ಎನ್ನುವ ಸಂತೋಷದಲ್ಲಿದ್ದ  ಜನತೆಗೆ ಮಧ್ಯಾಹ್ನದ ವೇಳೆಯಲ್ಲಿ ಮತ್ತೆ ಪ್ರಾರಂಭವಾದ ಮಳೆ ನಿರಾಸೆಯನ್ನುಂಟು ಮಾಡಿದೆ. ರಾತ್ರಿ ವೇಳೆ‌ ಮಳೆ‌ ಮತ್ತಷ್ಟು ಬಿರುಸು ಪಡೆದುಕೊಂಡಿದೆ. ಮಳೆಯೊಂದಿಗೆ ಗಾಳಿಯೂ ಸೇರಿಕೊಂಡಲ್ಲಿ ನದಿತೀರ‌ ಪ್ರದೇಶಗಳು ಹಾಗೂ ತಗ್ಗು ಪ್ರದೇಶಗಳು ನೆರೆಯ ನೀರಿನಲ್ಲಿ ಜಲಾವೃತವಾಗುವ ಆತಂಕಗಳು ಇವೆ. ಕುಂದಾಪುರದ ಉಪವಿಭಾಗಾಧಿಕಾರಿ‌‌ ರಶ್ಮಿ ಎಸ್.ಆರ್ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ ತಹಸೀಲ್ದಾರ್‌ಗಳಾದ‌ ಎಚ್.ಎಸ್ ಶೋಭಾಲಕ್ಷ್ಮಿ ಹಾಗೂ ಪ್ರದೀಪ್‌ ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಗಳ ಮೇಲುಸ್ತುವಾರಿ‌‌ ನ‌ಡೆಸಲಾಗುತ್ತಿದೆ.
ಕೃಷಿ ಪ್ರದೇಶ ಜಲಾವೃತ
ಗುಲ್ವಾಡಿ ಗ್ರಾ.ಪಂ ವ್ಯಾಪ್ತಿಯ ಸೌಕೂರು ಪ್ರತೀ ವರ್ಷವೂ ಮುಳುಗಡೆಯಾಗುತ್ತಿದ್ದು ಈ ಸಮಸ್ಯೆಗೆ ಶಾಶ್ವತ ಪರಿಹಾರ ಇನ್ನೂ ಸಿಕ್ಕಿಲ್ಲ. ಗುರುವಾರ ಸಂಪೂರ್ಣ ಜಲಾವೃತಗೊಂಡು ಜಲದಿಗ್ಭಂಧನದಲ್ಲಿದ್ದ ಜನತೆ ಶುಕ್ರವಾರ ನೆರೆ ನೀರು ಇಳಿದಿದ್ದರಿಂದ ಕೊಂಚ ಮಟ್ಟಿಗೆ ಸುಧಾರಿಸಿಕೊಂಡಿದ್ದಾರೆ. ಈ ಭಾಗದಲ್ಲಿ ರಸ್ತೆ ಸಂಚಾರ ಆರಂಭಗೊಂಡಿದೆಯಾದರೂ ಕೃಷಿಗದ್ದೆಯಲ್ಲಿ ತುಂಬಿಕೊಂಡಿರುವ ನೀರು ಇನ್ನೂ ಇಳಿದಿಲ್ಲ. ಕೆಲ ದಿನಗಳ ಹಿಂದಷ್ಟೇ ನಾಟಿ ಮಾಡಿರುವ ಭತ್ತದ ಸಸಿಗಳು ಕೊಳೆತು ಹೋಗುವ ಆತಂಕದಲ್ಲಿ ಇಲ್ಲಿನ ರೈತರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT