ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ ಭಾರಿ ಮಳೆ: ಕೊಚ್ಚಿ ಹೋಯ್ತು ಧೂಪದಕಟ್ಟೆ ರಸ್ತೆ

Last Updated 15 ಅಕ್ಟೋಬರ್ 2019, 14:23 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಾದ್ಯಂತ ಮಂಗಳವಾರ ಸುರಿದ ಗುಡುಗು, ಸಿಡಿಲು ಸರಿಹ ಭಾರಿ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿತು.

ಭಾರಿ ಮಳೆಗೆ ಭೈರಂಪಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ದೂಪದಕಟ್ಟೆಯ ಬಳಿಯ ರಸ್ತೆ ನೀರಿನಲ್ಲಿ ಕೊಚ್ಚಿಹೋಗಿದೆ. ತೋಡಿನ ನೀರು ರಭಸವಾಗಿ ನೀರು ರಸ್ತೆಗೆ ನುಗ್ಗಿದ ಪರಿಣಾಮ ಹಲವು ಮೀಟರ್‌ಗಳಷ್ಟು ರಸ್ತೆ ಹಾಳಾಗಿದೆ.

ಪೆರ್ಡೂರು ಹಾಗೂ ಹರಿಖಂಡಿಗೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಹರಿಖಂಡಿಗೆ ಗ್ರಾಮಕ್ಕೆ ವಾಹನಗಳ ಸಂಪರ್ಕ ಬಂದ್ ಆಗಿದೆ. ಪರಿಣಾಮ ಅಲ್ಲಿನ ಗ್ರಾಮಸ್ಥರು ತೀವ್ರ ಸಮಸ್ಯೆ ಅನುಭವಿಸುವಂತಾಯಿತು.

ಬೆಳೆ ನಾಶ:ನೆರೆ ಸೃಷ್ಟಿಯಾಗಿ ಕಟಾವಿಗೆ ಬಂದಿದ್ದ ಸುಮಾರು 40ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ತೋಟಗಾರಿಕಾ ಪ್ರದೇಶಗಳಿಗೆ ನೀರು ನುಗ್ಗಿದ್ದು, ಹೆಚ್ಚಿನ ಹಾನಿ ಸಂಭವಿಸಿದೆ. ಜತೆಗೆ, ಹಲವು ಮನೆಗಳು ನೆರೆಯಿಂದ ಜಲಾವೃತಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT