ಶ್ರವಣ ಬೆಳಗೊಳ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯರಾದ ಸುದ್ದಿ ಅತೀವ ದುಃಖ ತಂದಿದೆ. ಪೀಠದಲ್ಲಿ ಕುಳಿತು ಐದು ದಶಕಗಳ ಕಾಲ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ನಾಲ್ಕು ಮಹಾಮಸ್ತಕಾಭಿಷೇಕ ಪೂರೈಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿರುವ ಸ್ವಾಮೀಜಿ ಸದಾ ಕಾಲ ಅಹಿಂಸೆ, ತ್ಯಾಗ ಹಾಗೂ ಶಾಂತಿಯಿಂದ ಜೈನ ಪರಂಪರೆಯನ್ನು ಬೆಳಗಿದ್ದರು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.