<p><strong>ಹೆಬ್ರಿ</strong>: ಮುದ್ರಾಡಿ ಗ್ರಾಮದ ಬಲ್ಲಾಡಿಯ ಶ್ರೀ ಅಬ್ಬಗ ದಾರಗ ಅರ್ಧನಾರೀಶ್ವರ ದೇವಸ್ಥಾನ ಹಾಗೂ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನ ಜೀರ್ಣದ್ಧಾರ ಸಮಿತಿ ಅಧ್ಯಕ್ಷ ದಿವಾಕರ ಎನ್ ಶೆಟ್ಟಿ, ಜೀರ್ಣೋದ್ಧಾರಕ್ಕೆ ನೀಲನಕ್ಷೆ ರಚಿಸಿದ್ದು ಅಂದಾಜು ₹ 4.75 ಕೋಟಿ ವೆಚ್ಚ ತಗಲಬಹುದು ಎಂದರು.</p>.<p>ಸಮಿತಿಯ ಉಪಾಧ್ಯಕ್ಷ ಉದಯ ಹೆಗ್ಡೆ ಕೊಳಂಬೆ ಮಾತನಾಡಿ ಬೆಂಗಳೂರಿನಲ್ಲಿ ನೆಲೆಸಿರುವ ಊರಿನ ಜನರ ಸಂಪರ್ಕ ಮಾಡಿ ಜೀರ್ಣೋದ್ಧಾರ ಕಾರ್ಯಕ್ಕೆ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದರು. ಪೇಟೆಗಳಲ್ಲಿ ಫ್ಲೆಕ್ಸ್ ಅಳವಡಿಸಬೇಕು ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶುಭಧರ ಶೆಟ್ಟಿ ಹೇಳಿದರು.</p>.<p>ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗುರು ಪ್ರಸಾದ್ ಕೊಳಂಬೆ, ಮುದ್ರಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ ಹೆಗ್ಡೆ, ಸದಸ್ಯರಾದ ಗಣಪತಿ ಮುದ್ರಾಡಿ, ಸನತ್ ಕುಮಾರ್ ಹಾಜರಿದ್ದರು. ಶ್ರೀಧರ್ ಹೆಬ್ಬಾರ್ ಕಾಪೋಳಿ ಸ್ವಾಗತಿಸಿದರು. ಗರಡಿ ಅರ್ಚಕ ಸಂತೋಷ್ ಆರ್. ಪೂಜಾರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ</strong>: ಮುದ್ರಾಡಿ ಗ್ರಾಮದ ಬಲ್ಲಾಡಿಯ ಶ್ರೀ ಅಬ್ಬಗ ದಾರಗ ಅರ್ಧನಾರೀಶ್ವರ ದೇವಸ್ಥಾನ ಹಾಗೂ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನ ಜೀರ್ಣದ್ಧಾರ ಸಮಿತಿ ಅಧ್ಯಕ್ಷ ದಿವಾಕರ ಎನ್ ಶೆಟ್ಟಿ, ಜೀರ್ಣೋದ್ಧಾರಕ್ಕೆ ನೀಲನಕ್ಷೆ ರಚಿಸಿದ್ದು ಅಂದಾಜು ₹ 4.75 ಕೋಟಿ ವೆಚ್ಚ ತಗಲಬಹುದು ಎಂದರು.</p>.<p>ಸಮಿತಿಯ ಉಪಾಧ್ಯಕ್ಷ ಉದಯ ಹೆಗ್ಡೆ ಕೊಳಂಬೆ ಮಾತನಾಡಿ ಬೆಂಗಳೂರಿನಲ್ಲಿ ನೆಲೆಸಿರುವ ಊರಿನ ಜನರ ಸಂಪರ್ಕ ಮಾಡಿ ಜೀರ್ಣೋದ್ಧಾರ ಕಾರ್ಯಕ್ಕೆ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದರು. ಪೇಟೆಗಳಲ್ಲಿ ಫ್ಲೆಕ್ಸ್ ಅಳವಡಿಸಬೇಕು ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶುಭಧರ ಶೆಟ್ಟಿ ಹೇಳಿದರು.</p>.<p>ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗುರು ಪ್ರಸಾದ್ ಕೊಳಂಬೆ, ಮುದ್ರಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ ಹೆಗ್ಡೆ, ಸದಸ್ಯರಾದ ಗಣಪತಿ ಮುದ್ರಾಡಿ, ಸನತ್ ಕುಮಾರ್ ಹಾಜರಿದ್ದರು. ಶ್ರೀಧರ್ ಹೆಬ್ಬಾರ್ ಕಾಪೋಳಿ ಸ್ವಾಗತಿಸಿದರು. ಗರಡಿ ಅರ್ಚಕ ಸಂತೋಷ್ ಆರ್. ಪೂಜಾರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>