<p><strong>ಹೆಬ್ರಿ</strong>: ತಾಲ್ಲೂಕಿನ ಕಂಚರ್ಕಳ ಎಂಬಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಗೆ ನಿರ್ಮಿಸಿದ್ದ ಬದಲಿ ರಸ್ತೆಯು ಭಾರಿ ಮಳೆಯಿಂದ ಮುಳುಗಡೆಯಾಗಿದ್ದು, ರಸ್ತೆ ಬೇಡಿಕೆ ಕುರಿತು ಸ್ಥಳೀಯರಿಂದ ಮನವಿ ಬಂದಿದ್ದ ಹಿನ್ನೆಲೆ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಭಾರಿ ಮಳೆಯಿಂದ ತಾತ್ಕಾಲಿಕ ರಸ್ತೆಯ ಮೇಲೆ ನೀರು ಹರಿದು ವಾಹನಗಳು ಸಂಚರಿಸದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಬದಲಿ ಮಾರ್ಗ ಬಳಸಬೇಕು. ಸ್ಥಳೀಯ ಜನರಿಗೆ ನೆರವಾಗಲು ಮಳೆ ಕಡಿಮೆಯಾದ ಬಳಿಕ ಈ ರಸ್ತೆ ಬಳಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಸೇತುವೆ ಕೆಲಸದಲ್ಲಿ ಲೋಪ ಉಂಟಾಗದಂತೆ ಸಮರ್ಪಕವಾಗಿ ನಡೆಸುವಂತೆ ಅವರು ಸೂಚಿಸಿದರು.</p>.<p>ತಹಶೀಲ್ದಾರ್ ಎಸ್.ಎ. ಪ್ರಸಾದ್, ಕುಚ್ಚೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹೇಶ ಶೆಟ್ಟಿ ಬಾದ್ಲು, ಸದಸ್ಯ ಮಹೇಶ ಶೆಟ್ಟಿ ಕಾನ್ಬೆಟ್ಟು, ಸಮಾಜ ಸೇವಕ ರಾಘವೇಂದ್ರ ನಾಯ್ಕ, ಗುತ್ತಿಗೆದಾರ ಗಣೇಶ್ ಕುಲಾಲ್ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ</strong>: ತಾಲ್ಲೂಕಿನ ಕಂಚರ್ಕಳ ಎಂಬಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಗೆ ನಿರ್ಮಿಸಿದ್ದ ಬದಲಿ ರಸ್ತೆಯು ಭಾರಿ ಮಳೆಯಿಂದ ಮುಳುಗಡೆಯಾಗಿದ್ದು, ರಸ್ತೆ ಬೇಡಿಕೆ ಕುರಿತು ಸ್ಥಳೀಯರಿಂದ ಮನವಿ ಬಂದಿದ್ದ ಹಿನ್ನೆಲೆ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಭಾರಿ ಮಳೆಯಿಂದ ತಾತ್ಕಾಲಿಕ ರಸ್ತೆಯ ಮೇಲೆ ನೀರು ಹರಿದು ವಾಹನಗಳು ಸಂಚರಿಸದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಬದಲಿ ಮಾರ್ಗ ಬಳಸಬೇಕು. ಸ್ಥಳೀಯ ಜನರಿಗೆ ನೆರವಾಗಲು ಮಳೆ ಕಡಿಮೆಯಾದ ಬಳಿಕ ಈ ರಸ್ತೆ ಬಳಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಸೇತುವೆ ಕೆಲಸದಲ್ಲಿ ಲೋಪ ಉಂಟಾಗದಂತೆ ಸಮರ್ಪಕವಾಗಿ ನಡೆಸುವಂತೆ ಅವರು ಸೂಚಿಸಿದರು.</p>.<p>ತಹಶೀಲ್ದಾರ್ ಎಸ್.ಎ. ಪ್ರಸಾದ್, ಕುಚ್ಚೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹೇಶ ಶೆಟ್ಟಿ ಬಾದ್ಲು, ಸದಸ್ಯ ಮಹೇಶ ಶೆಟ್ಟಿ ಕಾನ್ಬೆಟ್ಟು, ಸಮಾಜ ಸೇವಕ ರಾಘವೇಂದ್ರ ನಾಯ್ಕ, ಗುತ್ತಿಗೆದಾರ ಗಣೇಶ್ ಕುಲಾಲ್ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>