ಈ ಸುದ್ದಿ ಹರಡುತ್ತಿದ್ದಂತೆ ಉನ್ನತಾಧಿಕಾರಿಗಳು ಇಲಾಖೆಯ ಹಲವರನ್ನು ಸಂಪರ್ಕಿಸಿ ಮಾಹಿತಿ ಕಲೆಹಾಕಿದರು. ಅದರಂತೆ ಎಸ್ಐ ಮಹಾಬಲ ಶೆಟ್ಟಿ ಅವರು ಹೆಬ್ರಿ ಠಾಣಾ ವ್ಯಾಪ್ತಿಯ ಕಳ್ತೂರು ಸಂತೇಕಟ್ಟೆಯಲ್ಲಿ ಜಮೀನಿಗೆ ಸಂಬಂಧಿಸಿದ ಪ್ರಕರಣವನ್ನು ಗುರುವಾರ ದಾಖಲಿಸಿದ್ದರು. ಪ್ರಕರಣದ ಇನ್ನೊಂದು ಕಡೆಯವರು ಶುಕ್ರವಾರ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿ ಹೆಬ್ರಿ ಪೊಲೀಸರ ಬಗ್ಗೆ ದೂರು ನೀಡಿದ್ದು, ಈ ವಿಚಾರವಾಗಿ ಪೊಲೀಸ್ ಅಧೀಕ್ಷಕರು ಠಾಣಾಧಿಕಾರಿಯನ್ನು ಕರೆಯಿಸಿ ವಿಚಾರಿಸಿದ್ದಾರೆ ಎನ್ನಲಾಗಿದೆ. ಅದಾದ ಕೆಲವೇ ಹೊತ್ತಿನಲ್ಲಿ ಠಾಣಾಧಿಕಾರಿ ಮಹಾಬಲ ಶೆಟ್ಟಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿಜವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ.