<p><strong>ಹೆಬ್ರಿ:</strong> ಹೆಬ್ರಿ ಪರಿಸರದ ಚೆಕ್ ಪೋಸ್ಟ್ಗಳಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಆಗುಂಬೆ ಘಾಟಿಯಲ್ಲಿ ಸಂಚಾರ ಸಮಸ್ಯೆ ಉಂಟಾದಾಗ ಹೆಬ್ರಿಯಲ್ಲೇ ವಾಹನಗಳನ್ನು ತಡೆಯಬೇಕು, ಚೆಕ್ ಪೋಸ್ಟ್ನಲ್ಲಿ ತಡೆದಾಗ ವಾಹನ ಸವಾರರಿಗೆ ಸಮಸ್ಯೆಗಳು ಆಗುತ್ತದೆ ಎಂದು ಗ್ರಾಮಸ್ಥರು ನಾಡ್ಪಾಲು ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದರು.</p>.<p>ತಾಲ್ಲೂಕಿನ ನಾಡ್ಪಾಲು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದ ಗ್ರಾಮಸ್ಥರು, ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟು ಮಾಡುವುದು ಸರಿಯಲ್ಲ ಎಂದರು.</p>.<p>ಚೆಕ್ ಪೋಸ್ಟ್ ಬಳಿ ದೊಡ್ಡ ವಾಹನಗಳನ್ನು ಪರಿಶೀಲನೆಗೆ ನಿಲ್ಲಿಸುವುದರಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು. ಕಾರ್ಯಚರಿಸುತ್ತಿರುವ ಚೆಕ್ ಪೋಸ್ಟ್ಗಳಿಂದ ಆಗುತ್ತಿರುವ ಅನಾಹುತಗಳನ್ನು ಸಭೆಯಲ್ಲಿ ಗ್ರಾಮಸ್ಥರು ವಿವರಿಸಿದರು.</p>.<p>ಅರಣ್ಯ ಮತ್ತು ಕಂದಾಯ ಇಲಾಖೆಯವರು ಜಂಟಿ ಸರ್ವೆ ಮೂಲಕ ತಮ್ಮ ಜಮೀನು ಹದ್ದುಬಸ್ತು ಮಾಡಿಕೊಳ್ಳುವಂತೆ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದರು.</p>.<p>2026 -27ನೇ ಸಾಲಿನ ಗ್ರಾಮ ಪಂಚಾಯಿತಿಯ ದೂರದೃಷ್ಠಿ ಯೋಜನೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಹೆಬ್ರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ನಾಡ್ಪಾಲು ಗ್ರಾಮದ ವಿಜಯಾ ಅವರನ್ನು ಗೌರವಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸಭೆಯ ಮಾರ್ಗದರ್ಶಕ ಅಧಿಕಾರಿಯಾದ ಕೃಷಿ ಅಧಿಕಾರಿ ರಮೇಶ್, ನಾಡ್ಪಾಲು ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ ಹೆಗ್ಡೆ, ಆಶಾ, ಸುಮಂಗಲ, ರಾಘವೇಂದ್ರ ಹೆಗ್ಡೆ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p>ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದೇವಕಿ ವರದಿ ಮಂಡಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೆಗಾರ್ ನಿರೂಪಿಸಿದರು.</p>.<p><strong>ಸಂಚಾರ ಸಮಸ್ಯೆ ಪರಿಹರಿಸಲು ಜನರ ಆಗ್ರಹ ಚೆಕ್ ಪೋಸ್ಟ್ ಬಳಿ ದೊಡ್ಡ ವಾಹನಗಳ ಪರಿಶೀಲನೆಯಿಂದ ಇತರರಿಗೆ ತೊಂದರೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ:</strong> ಹೆಬ್ರಿ ಪರಿಸರದ ಚೆಕ್ ಪೋಸ್ಟ್ಗಳಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಆಗುಂಬೆ ಘಾಟಿಯಲ್ಲಿ ಸಂಚಾರ ಸಮಸ್ಯೆ ಉಂಟಾದಾಗ ಹೆಬ್ರಿಯಲ್ಲೇ ವಾಹನಗಳನ್ನು ತಡೆಯಬೇಕು, ಚೆಕ್ ಪೋಸ್ಟ್ನಲ್ಲಿ ತಡೆದಾಗ ವಾಹನ ಸವಾರರಿಗೆ ಸಮಸ್ಯೆಗಳು ಆಗುತ್ತದೆ ಎಂದು ಗ್ರಾಮಸ್ಥರು ನಾಡ್ಪಾಲು ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದರು.</p>.<p>ತಾಲ್ಲೂಕಿನ ನಾಡ್ಪಾಲು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದ ಗ್ರಾಮಸ್ಥರು, ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟು ಮಾಡುವುದು ಸರಿಯಲ್ಲ ಎಂದರು.</p>.<p>ಚೆಕ್ ಪೋಸ್ಟ್ ಬಳಿ ದೊಡ್ಡ ವಾಹನಗಳನ್ನು ಪರಿಶೀಲನೆಗೆ ನಿಲ್ಲಿಸುವುದರಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು. ಕಾರ್ಯಚರಿಸುತ್ತಿರುವ ಚೆಕ್ ಪೋಸ್ಟ್ಗಳಿಂದ ಆಗುತ್ತಿರುವ ಅನಾಹುತಗಳನ್ನು ಸಭೆಯಲ್ಲಿ ಗ್ರಾಮಸ್ಥರು ವಿವರಿಸಿದರು.</p>.<p>ಅರಣ್ಯ ಮತ್ತು ಕಂದಾಯ ಇಲಾಖೆಯವರು ಜಂಟಿ ಸರ್ವೆ ಮೂಲಕ ತಮ್ಮ ಜಮೀನು ಹದ್ದುಬಸ್ತು ಮಾಡಿಕೊಳ್ಳುವಂತೆ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದರು.</p>.<p>2026 -27ನೇ ಸಾಲಿನ ಗ್ರಾಮ ಪಂಚಾಯಿತಿಯ ದೂರದೃಷ್ಠಿ ಯೋಜನೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಹೆಬ್ರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ನಾಡ್ಪಾಲು ಗ್ರಾಮದ ವಿಜಯಾ ಅವರನ್ನು ಗೌರವಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸಭೆಯ ಮಾರ್ಗದರ್ಶಕ ಅಧಿಕಾರಿಯಾದ ಕೃಷಿ ಅಧಿಕಾರಿ ರಮೇಶ್, ನಾಡ್ಪಾಲು ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ ಹೆಗ್ಡೆ, ಆಶಾ, ಸುಮಂಗಲ, ರಾಘವೇಂದ್ರ ಹೆಗ್ಡೆ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p>ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದೇವಕಿ ವರದಿ ಮಂಡಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೆಗಾರ್ ನಿರೂಪಿಸಿದರು.</p>.<p><strong>ಸಂಚಾರ ಸಮಸ್ಯೆ ಪರಿಹರಿಸಲು ಜನರ ಆಗ್ರಹ ಚೆಕ್ ಪೋಸ್ಟ್ ಬಳಿ ದೊಡ್ಡ ವಾಹನಗಳ ಪರಿಶೀಲನೆಯಿಂದ ಇತರರಿಗೆ ತೊಂದರೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>