<p><strong>ಪಡುಬಿದ್ರಿ</strong>: ಸ್ಥಳೀಯ ವಾಹನಗಳ ದಾಖಲೆ ಸಂಗ್ರಹಕ್ಕೆ ಮುಂದಾಗಿರುವ ಹೆಜಮಾಡಿಯ ಕೆ.ಕೆ.ಆರ್. ಟೋಲ್ ಪ್ಲಾಜಾದಲ್ಲಿ ಟೋಲ್ ವಿರೋಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ದಿನಾಂಕ ವಿಸ್ತರಿಸಲು ಮನವಿ ಮಾಡಿದರು. </p>.<p>ಆ. 6ರಂದು ಬಂಟ್ವಾಳದ ಯುವಕನೊಬ್ಬ ದಾಂದಲೆ ನಡೆಸಿದ ಘಟನೆ ಬಳಿಕ, ವಿನಾಯಿತಿ ಹೊಂದಿರುವ ಸ್ಥಳೀಯ ವಾಹನಗಳ ಮಾಲೀಕರು ಹಾಗೂ ವಾಹನದ ಆರ್.ಸಿ. ಪ್ರತಿ ಸಲ್ಲಿಸಲು ಟೋಲ್ ಮುಖ್ಯಸ್ಥರು ಸೂಚಿಸಿದ್ದಾರೆ. ಜುಲೈ ತಿಂಗಳೊಂದರಲ್ಲೆ 2 ಸಾವಿರಕ್ಕೂ ಅಧಿಕ ಹೊಸ ಸ್ಥಳೀಯ ವಾಹನಗಳು ಟೋಲ್ ವಿನಾಯಿತಿ ಪಡೆದ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಟೋಲ್ ವಿನಾಯಿತಿ ಹೊಂದಿರುವ ಸ್ಥಳೀಯ ವಾಹನಗಳು ತಮ್ಮ ಆರ್.ಸಿ. ಪ್ರತಿಯನ್ನು ಟೋಲ್ ಕಚೇರಿಗೆ ಆ. 10ರೊಳಗೆ ಸಲ್ಲಿಸುವಂತೆ ಬ್ಯಾನರ್ ಮೂಲಕ ಮಾಹಿತಿ ನೀಡಿತ್ತು.</p>.<p>ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ಲಭ್ಯವಾಗದ ಹಿನ್ನೆಲೆ ಟೋಲ್ ವಿರೋಧಿ ಹೋರಾಟ ಸಮಿತಿ ದಾಖಲೆ ಒದಗಿಸಲು ದಿನಾಂಕ ವಿಸ್ತರಿಸಲು ಮನವಿ ಮಾಡಿತು.</p>.<p>ಟೋಲ್ ವ್ಯವಸ್ಥಾಪಕ ತಿಮ್ಮಯ್ಯ ಮಾತನಾಡಿ, ‘ಜಿಲ್ಲಾಡಳಿತ ತಿಳಿಸಿದಂತೆ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡಲು ಸಂಸ್ಥೆ ಬದ್ಧವಾಗಿದೆ. ಆದರೆ, ಹೆಜಮಾಡಿ ಗ್ರಾಮವೊಂದರಲ್ಲಿ ನಕಲಿ ದಾಖಲೆಯಲ್ಲಿ ವಾಹನಗಳು ಹೆಚ್ಚು ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ವಾಹನಗಳು ಆರ್.ಸಿ. ಪ್ರತಿ ಒದಗಿಸಿದರೆ ಕಂಪ್ಯೂಟರ್ ಮೂಲಕ ದಾಖಲೆ ಸಂಗ್ರಹಿಸಿ ಅರ್ಹರಿಗೆ ವಿನಾಯಿತಿ ನೀಡಲು ಸಾಧ್ಯವಾಗುತ್ತದೆ. ದಾಖಲೆ ಪ್ರತಿ ಒದಗಿಸಲು ಆ. 31ರವರೆಗೆ ಅವಕಾಶ ಕಲ್ಪಿಸಲಾಗುವುದು’ ಎಂದರು.</p>.<p>ಟೋಲ್ ಪ್ಲಾಜಾದಲ್ಲಿ ಸ್ಥಳೀಯ ನೌಕರರ ಬಗ್ಗೆ ಶೇಖರ್ ಹೆಜಮಾಡಿ ಮೌಖಿಕ ಮನವಿ ಸಲ್ಲಿಸಿ, ಸ್ಥಳೀಯರಿಗೆ ಉದ್ಯೋಗ ನೀಡುವ ಜತೆಗೆ ಭದ್ರತೆಯನ್ನೂ ಒದಗಿಸುವಂತೆ ವಿನಂತಿಸಿದರು.</p>.<p>ಸಮಿತಿಯ ಪದಾಧಿಕಾರಿಗಳಾದ ಪಾಂಡುರಂಗ ಕರ್ಕೇರ, ಮಧು ಅಚಾರ್ಯ ಮೂಲ್ಕಿ, ಸುಧೀರ್ ಕರ್ಕೇರ, ತೇಜಪಾಲ್ ಸುವರ್ಣ, ಸಂತೋಷ್ ಪಡುಬಿದ್ರಿ, ರಮೀಝ್ ಹುಸೈನ್, ಖಾದರ್ ಹೆಜ್ಮಾಡಿ, ಪ್ರಾಣೇಶ್ ಹೆಜ್ಮಾಡಿ, ವಿಕ್ರಮ್ರಾಜ್ ಸುವರ್ಣ, ಅಹಮದ್ ಕಬೀರ್, ಅಬ್ದುಲ್ ರೆಹ್ಮಾನ್, ಹನೀಫ್ ಕನ್ನಂಗಾರ್, ಕಾಸಿಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ</strong>: ಸ್ಥಳೀಯ ವಾಹನಗಳ ದಾಖಲೆ ಸಂಗ್ರಹಕ್ಕೆ ಮುಂದಾಗಿರುವ ಹೆಜಮಾಡಿಯ ಕೆ.ಕೆ.ಆರ್. ಟೋಲ್ ಪ್ಲಾಜಾದಲ್ಲಿ ಟೋಲ್ ವಿರೋಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ದಿನಾಂಕ ವಿಸ್ತರಿಸಲು ಮನವಿ ಮಾಡಿದರು. </p>.<p>ಆ. 6ರಂದು ಬಂಟ್ವಾಳದ ಯುವಕನೊಬ್ಬ ದಾಂದಲೆ ನಡೆಸಿದ ಘಟನೆ ಬಳಿಕ, ವಿನಾಯಿತಿ ಹೊಂದಿರುವ ಸ್ಥಳೀಯ ವಾಹನಗಳ ಮಾಲೀಕರು ಹಾಗೂ ವಾಹನದ ಆರ್.ಸಿ. ಪ್ರತಿ ಸಲ್ಲಿಸಲು ಟೋಲ್ ಮುಖ್ಯಸ್ಥರು ಸೂಚಿಸಿದ್ದಾರೆ. ಜುಲೈ ತಿಂಗಳೊಂದರಲ್ಲೆ 2 ಸಾವಿರಕ್ಕೂ ಅಧಿಕ ಹೊಸ ಸ್ಥಳೀಯ ವಾಹನಗಳು ಟೋಲ್ ವಿನಾಯಿತಿ ಪಡೆದ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಟೋಲ್ ವಿನಾಯಿತಿ ಹೊಂದಿರುವ ಸ್ಥಳೀಯ ವಾಹನಗಳು ತಮ್ಮ ಆರ್.ಸಿ. ಪ್ರತಿಯನ್ನು ಟೋಲ್ ಕಚೇರಿಗೆ ಆ. 10ರೊಳಗೆ ಸಲ್ಲಿಸುವಂತೆ ಬ್ಯಾನರ್ ಮೂಲಕ ಮಾಹಿತಿ ನೀಡಿತ್ತು.</p>.<p>ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ಲಭ್ಯವಾಗದ ಹಿನ್ನೆಲೆ ಟೋಲ್ ವಿರೋಧಿ ಹೋರಾಟ ಸಮಿತಿ ದಾಖಲೆ ಒದಗಿಸಲು ದಿನಾಂಕ ವಿಸ್ತರಿಸಲು ಮನವಿ ಮಾಡಿತು.</p>.<p>ಟೋಲ್ ವ್ಯವಸ್ಥಾಪಕ ತಿಮ್ಮಯ್ಯ ಮಾತನಾಡಿ, ‘ಜಿಲ್ಲಾಡಳಿತ ತಿಳಿಸಿದಂತೆ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡಲು ಸಂಸ್ಥೆ ಬದ್ಧವಾಗಿದೆ. ಆದರೆ, ಹೆಜಮಾಡಿ ಗ್ರಾಮವೊಂದರಲ್ಲಿ ನಕಲಿ ದಾಖಲೆಯಲ್ಲಿ ವಾಹನಗಳು ಹೆಚ್ಚು ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ವಾಹನಗಳು ಆರ್.ಸಿ. ಪ್ರತಿ ಒದಗಿಸಿದರೆ ಕಂಪ್ಯೂಟರ್ ಮೂಲಕ ದಾಖಲೆ ಸಂಗ್ರಹಿಸಿ ಅರ್ಹರಿಗೆ ವಿನಾಯಿತಿ ನೀಡಲು ಸಾಧ್ಯವಾಗುತ್ತದೆ. ದಾಖಲೆ ಪ್ರತಿ ಒದಗಿಸಲು ಆ. 31ರವರೆಗೆ ಅವಕಾಶ ಕಲ್ಪಿಸಲಾಗುವುದು’ ಎಂದರು.</p>.<p>ಟೋಲ್ ಪ್ಲಾಜಾದಲ್ಲಿ ಸ್ಥಳೀಯ ನೌಕರರ ಬಗ್ಗೆ ಶೇಖರ್ ಹೆಜಮಾಡಿ ಮೌಖಿಕ ಮನವಿ ಸಲ್ಲಿಸಿ, ಸ್ಥಳೀಯರಿಗೆ ಉದ್ಯೋಗ ನೀಡುವ ಜತೆಗೆ ಭದ್ರತೆಯನ್ನೂ ಒದಗಿಸುವಂತೆ ವಿನಂತಿಸಿದರು.</p>.<p>ಸಮಿತಿಯ ಪದಾಧಿಕಾರಿಗಳಾದ ಪಾಂಡುರಂಗ ಕರ್ಕೇರ, ಮಧು ಅಚಾರ್ಯ ಮೂಲ್ಕಿ, ಸುಧೀರ್ ಕರ್ಕೇರ, ತೇಜಪಾಲ್ ಸುವರ್ಣ, ಸಂತೋಷ್ ಪಡುಬಿದ್ರಿ, ರಮೀಝ್ ಹುಸೈನ್, ಖಾದರ್ ಹೆಜ್ಮಾಡಿ, ಪ್ರಾಣೇಶ್ ಹೆಜ್ಮಾಡಿ, ವಿಕ್ರಮ್ರಾಜ್ ಸುವರ್ಣ, ಅಹಮದ್ ಕಬೀರ್, ಅಬ್ದುಲ್ ರೆಹ್ಮಾನ್, ಹನೀಫ್ ಕನ್ನಂಗಾರ್, ಕಾಸಿಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>