ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ನೇಕಾರನ ಕಷ್ಟಕ್ಕೆ ಸ್ಪಂದನೆ, ಹರಿದುಬಂತು ನೆರವು

ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಸಚಿವೆ ಸ್ಮೃತಿ ಇರಾನಿ
Last Updated 22 ಸೆಪ್ಟೆಂಬರ್ 2020, 20:30 IST
ಅಕ್ಷರ ಗಾತ್ರ

ಉಡುಪಿ: ನೆರೆಗೆ ಸಿಲುಕಿ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಬೆಂಗಳೂರಿನ ನೇಕಾರರ ಸೇವಾ ಕೇಂದ್ರ ಸೇರಿದಂತೆ ಹಲವು ಸಂಘ ಸಂಸ್ಥೆಗಳು ನೆರವಿನ ಹಸ್ತ ಚಾಚಿದ್ದಾರೆ.

ಈಚೆಗೆ ಲಕ್ಷ್ಮಣ ಶೆಟ್ಟಿಗಾರ್ ಅವರು ಪತ್ನಿ ಜತೆ ನೆರೆ ನೀರಿನಲ್ಲಿ ಅಸಹಾಯಕ ಸ್ಥಿತಿಯಲ್ಲಿ ನಿಂತಿದ್ದ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸುದ್ದಿಯಾಗಿತ್ತು. ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಸುದ್ದಿಯನ್ನು ಗಮನಿಸಿ, ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಅದರಂತೆ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕಶಿವಶಂಕರ್, ಲಕ್ಷ್ಮಣ ಶೆಟ್ಟಿಗಾರ್‌ ನಿವಾಸಕ್ಕೆ ಭೇಟಿನೀಡಿ ತುರ್ತು ಆರ್ಥಿಕ ನೆರವು ನೀಡಿದರು. ವೀವರ್ಸ್ ಸರ್ವಿಸ್ ಸೆಂಟರ್ ಅಧಿಕಾರಿಗಳಾದ ಜವಹರ್ ಹಾಗೂ ತುಳಸಿ ರಾಮ್ ಮಗ್ಗದ ಮನೆ ಹಾಗೂ ಬದಲಿ ಸಲಕರಣೆಗೆ ನೆರವು ಮಂಜೂರು ಮಾಡಿದರು.

ಬಿಜೆಪಿ ಯುವ ಮೋರ್ಚಾ ಸೇರಿದಂತೆ ಹಲವು ಸಂಘಟನೆಗಳು ನೆರವು ನೀಡಿವೆ. ವೈಯಕ್ತಿಕವಾಗಿಯೂ ಹಲವರು ಖಾತೆಗೆ ಹಣ ಹಾಕಿದ್ದಾರೆ ಎಂದು ಪುತ್ರ ಗೋಪಾಲ್ ಶೆಟ್ಟಿಗಾರ್ ಮಾಹಿತಿ ನೀಡಿದರು.

ಮಳೆಗೆ ಹಾಳಾಗಿರುವ ಮಗ್ಗವನ್ನು ದುರಸ್ತಿಗೊಳಿಸಿ, ಹಾನಿಗೊಳಗಾಗಿರುವ ಮನೆಯನ್ನು ರಿಪೇರಿ ಮಾಡಿಸುವುದಾಗಿ ತಿಳಿಸಿದ ಗೋಪಾಲ್ ಶೆಟ್ಟಿಗಾರ್, ಕಷ್ಟಕ್ಕೆ ಸ್ಪಂದಿಸಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

5 ದಶಕಗಳಿಂದ ಕಾಯಕ:72 ವರ್ಷದ ಲಕ್ಷ್ಮಣ ಶೆಟ್ಟಿಗಾರ್ ಯಕ್ಷಗಾನಕ್ಕೆ ಬಳಸುವ ವಿಶಿಷ್ಟ ಸೀರೆಗಳನ್ನು ಮಗ್ಗದಲ್ಲಿ ನೇಯ್ಯುವ ಕೆಲವೇ ನೇಕಾರರಲ್ಲಿ ಒಬ್ಬರಾಗಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ಕುಲಕಸುಬು ತೊರೆಯದೆ 5 ದಶಕಗಳಿಂದಲೂ ನೇಕಾರ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT