<p>ಪ್ರಜಾವಾಣಿ ವಾರ್ತೆ</p>.<p>ಬೈಂದೂರು: ಇಲ್ಲಿನ ಮರವಂತೆ ಜನತಾ ಕಾಲೊನಿ ನಿವಾಸಿ ಶಂಕರ ಖಾರ್ವಿ ಹಾಗೂ ಪಾರ್ವತಿ ಖಾರ್ವಿ ದಂಪತಿಯ ಪುತ್ರ ಸುಭಾಸ್ ಖಾರ್ವಿ (28) ಗುಲಿಯನ್ ಬೇರ್ ಸಿಂಡ್ರೋಮ್ ಎಂಬ ನರರೋಗ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಾಯಿಲೆಯ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗಾಗಿ ₹ 4 ರಿಂದ ₹ 5 ಲಕ್ಷ ವೆಚ್ಚವಾಗಲಿದೆ ಮಣಿಪಾಲ ಆಸ್ಪತ್ರೆ ವೈದ್ಯರು ಹೇಳಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.</p>.<p>ಶಂಕರ್ ಖಾರ್ವಿ ಅವರು ಮೀನುಗಾರರಾಗಿದ್ದು, ಅವರ ಕುಟುಂಬ ಅವರ ದುಡಿಮೆ ಯಿಂದಲೇ ಸಾಗಬೇಕು. ಅವರು ಕೂಡ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜತೆಗೆ ಪಾರ್ವತಿ ಅವರಿಗೂ ಥೈರಾಯ್ಡ್ ಸಂಬಂಧಿ ಕಾಯಿಲೆ ಇದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಮಗ ಸುಭಾಸ್ ಖಾರ್ವಿಗೆ ಈ ರೀತಿಯ ನರ ಸಂಬಂಧಿ ರೋಗ ಕಾಣಿಸಿಕೊಂಡಿದ್ದು, ಚಿಕಿತ್ಸೆ ಕೊಡಿಸುವುದಕ್ಕೆ ಪೋಷಕರು ಪರದಾಡುತ್ತಿದ್ದಾರೆ.</p>.<p>ದಿನದ ದುಡಿಮೆಯಿಂದ ಜೀವನ ಸಾಗಿಸುವ ಕುಟುಂಬಕ್ಕೆ ಮಗನ ಚಿಕಿತ್ಸೆಗಾಗಿ ಹಣದ ಅಗತ್ಯವಿದ್ದು ದಾನಿಗಳ, ಸಂಘಟನೆಗಳ ಆರ್ಥಿಕ ನೆರವಿನ ಸಹಾಯದ ನಿರೀಕ್ಷೆಯಲ್ಲಿ ಕುಟುಂಬವಿದೆ. ಆರ್ಥಿಕ ನೆರವಿನ ಅಗತ್ಯವಿದ್ದು, ಸಹಾಯಕ್ಕೆ ಮನವಿ ಮಾಡಿದ್ದಾರೆ.</p>.<p>ಸುಭಾಸ್ ಖಾರ್ವಿ ಚಿಕಿತ್ಸೆಗೆ ಆರ್ಥಿಕ ಸಹಾಯ ಮಾಡು ವವರು ಅವರ ತಾಯಿ ಹೆಸರಿನಲ್ಲಿ ಇರುವ ಮರವಂತೆ ಕೆನರಾ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವಂತೆ ಮನವಿ ಮಾಡಿದ್ದಾರೆ.</p>.<p>ಪಾರ್ವತಿ ಶಂಕರ್ ಖಾರ್ವಿ, ಉಳಿತಾಯ ಖಾತೆ: 02822250002001 ಐಎಫ್ಎಸ್ಸಿ ಕೋಡ್: CNRB0010282 ಗೆ ಜಮೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 78929–98903 ಸಂಖ್ಯೆಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಬೈಂದೂರು: ಇಲ್ಲಿನ ಮರವಂತೆ ಜನತಾ ಕಾಲೊನಿ ನಿವಾಸಿ ಶಂಕರ ಖಾರ್ವಿ ಹಾಗೂ ಪಾರ್ವತಿ ಖಾರ್ವಿ ದಂಪತಿಯ ಪುತ್ರ ಸುಭಾಸ್ ಖಾರ್ವಿ (28) ಗುಲಿಯನ್ ಬೇರ್ ಸಿಂಡ್ರೋಮ್ ಎಂಬ ನರರೋಗ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಾಯಿಲೆಯ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗಾಗಿ ₹ 4 ರಿಂದ ₹ 5 ಲಕ್ಷ ವೆಚ್ಚವಾಗಲಿದೆ ಮಣಿಪಾಲ ಆಸ್ಪತ್ರೆ ವೈದ್ಯರು ಹೇಳಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.</p>.<p>ಶಂಕರ್ ಖಾರ್ವಿ ಅವರು ಮೀನುಗಾರರಾಗಿದ್ದು, ಅವರ ಕುಟುಂಬ ಅವರ ದುಡಿಮೆ ಯಿಂದಲೇ ಸಾಗಬೇಕು. ಅವರು ಕೂಡ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜತೆಗೆ ಪಾರ್ವತಿ ಅವರಿಗೂ ಥೈರಾಯ್ಡ್ ಸಂಬಂಧಿ ಕಾಯಿಲೆ ಇದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಮಗ ಸುಭಾಸ್ ಖಾರ್ವಿಗೆ ಈ ರೀತಿಯ ನರ ಸಂಬಂಧಿ ರೋಗ ಕಾಣಿಸಿಕೊಂಡಿದ್ದು, ಚಿಕಿತ್ಸೆ ಕೊಡಿಸುವುದಕ್ಕೆ ಪೋಷಕರು ಪರದಾಡುತ್ತಿದ್ದಾರೆ.</p>.<p>ದಿನದ ದುಡಿಮೆಯಿಂದ ಜೀವನ ಸಾಗಿಸುವ ಕುಟುಂಬಕ್ಕೆ ಮಗನ ಚಿಕಿತ್ಸೆಗಾಗಿ ಹಣದ ಅಗತ್ಯವಿದ್ದು ದಾನಿಗಳ, ಸಂಘಟನೆಗಳ ಆರ್ಥಿಕ ನೆರವಿನ ಸಹಾಯದ ನಿರೀಕ್ಷೆಯಲ್ಲಿ ಕುಟುಂಬವಿದೆ. ಆರ್ಥಿಕ ನೆರವಿನ ಅಗತ್ಯವಿದ್ದು, ಸಹಾಯಕ್ಕೆ ಮನವಿ ಮಾಡಿದ್ದಾರೆ.</p>.<p>ಸುಭಾಸ್ ಖಾರ್ವಿ ಚಿಕಿತ್ಸೆಗೆ ಆರ್ಥಿಕ ಸಹಾಯ ಮಾಡು ವವರು ಅವರ ತಾಯಿ ಹೆಸರಿನಲ್ಲಿ ಇರುವ ಮರವಂತೆ ಕೆನರಾ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವಂತೆ ಮನವಿ ಮಾಡಿದ್ದಾರೆ.</p>.<p>ಪಾರ್ವತಿ ಶಂಕರ್ ಖಾರ್ವಿ, ಉಳಿತಾಯ ಖಾತೆ: 02822250002001 ಐಎಫ್ಎಸ್ಸಿ ಕೋಡ್: CNRB0010282 ಗೆ ಜಮೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 78929–98903 ಸಂಖ್ಯೆಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>