ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ ಕಾಮಗಾರಿ ಪ್ರಗತಿ ಕುರಿತು ಸಭೆ ನಡೆಸಿದ ಅವರು, ಕುಂದಾಪುರದ ಮೇಲ್ಸೇತುವೆ ಕಾಮಗಾರಿ ಮೂರುಕೈ ಬಳಿಯ ಅಂಡರ್ಪಾಸ್ ಕಾಮಗಾರಿ, ಪಡುಬಿದ್ರಿಯ ಸೇತುವೆ ಕಾಮಗಾರಿ ವಿಳಂಬದ ಬಗ್ಗೆ ಸಾರ್ವಜನಿಕರಿಂದ ಪದೇಪದೇ ದೂರು, ಮನವಿಗಳು ಸಲ್ಲಿಕೆಯಾಗುತ್ತಿವೆ. ಎರಡೂ ಕಾಮಗಾರಿಗಳನ್ನು ಶೀಘ್ರ ಮುಗಿಸಿ, ಸಾರ್ವಜನಿಕರ ಬಳಕೆಗೆ ರಸ್ತೆಗಳು ಮುಕ್ತವಾಗಬೇಕು ಎಂದು ನಿರ್ದೇಶನ ನೀಡಿದರು.