ಉಡುಪಿ: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಕ್ಕೆ ಪ್ರತಿಯಾಗಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಗುರುವಾರ ಕೇಸರಿ ಶಾಲು ಧರಿಸಿಕೊಂಡು ಬಂದು ಜೈ ಶ್ರೀರಾಮ್ ಘೋಷಣೆ ಕೂಗಿದರು.
ಕಾಲೇಜು ಗೇಟ್ ಎದುರು ಗುಂಪು ಸೇರಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರವೇಶಿಸಲು ಸಿಬ್ಬಂದಿ ಅನುಮತಿ ನೀಡಲಿಲ್ಲ.
ನಂತರ ಕೇಸರಿ ಶಾಲು ತೆಗೆದು ವಿದ್ಯಾರ್ಥಿಗಳು ಕಾಲೇಜು ಒಳಗೆ ತೆರಳಿದರು.