ಯಾವುದೇ ವ್ಯಕ್ತಿ ಅಥವಾ ನಿರ್ದಿಷ್ಟ ಸಂಘಟನೆಗಳಿಂದ ಬೆದರಿಕೆ ಕರೆ ಬಂದಿಲ್ಲ. ಹೈದರಾಬಾದ್ನಿಂದ ಇಂಟರ್ನೆಟ್ ಕರೆ ಮಾಡಿದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಸ್ಥಳೀಯವಾಗಿ ಎರಡು ಕರೆಗಳು ಬಂದಿವೆ. ಈ ಸಂಬಂಧ ಗೃಹ ಸಚಿವರಿಗೆ ಮೌಖಿಕವಾಗಿ ತಿಳಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕರೆ ಮಾಡಿ ಭದ್ರತೆ ಒದಗಿಸುವುದಾಗಿ ತಿಳಿಸಿದ್ದಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.