<p><strong>ಉಡುಪಿ: </strong>ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕಾರಣಕ್ಕೆ ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರಾದ ಅಲಿಯಾ ಅಸಾದಿ ಹಾಗೂ ರೇಶಮ್ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದೆ ಮನೆಗೆ ವಾಪಸಾದರು.</p>.<p>ಚಿಕ್ಕಬಳ್ಳಾಪುರದಸರ್ ಎಂ.ವಿಶ್ವೇಶ್ವರಯ್ಯ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಿಂದಲೂ, ಹಿಜಾಬ್ ತೆರೆಯಲು ನಿರಾಕರಿಸಿದ ವಿದ್ಯಾರ್ಥಿನಿ ನೂರ್ ಮಿಸ್ಬಾ ಕ್ವಾನೈನ್ ಅವರು ಪರೀಕ್ಷಾ ಕೇಂದ್ರದಿಂದ ಹೊರನಡೆದಿದ್ದಾರೆ.</p>.<p>ಉಡುಪಿಯಲ್ಲಿ ತಹಶೀಲ್ದಾರ್ ಅರ್ಚನಾ ಭಟ್ ಮತ್ತು ಕಾಲೇಜು ಪ್ರಾಂಶುಪಾಲರು ಮನವೊಲಿಸಲು ಯತ್ನಿಸಿದರೂ ವಿದ್ಯಾರ್ಥಿನಿಯರು ಒಪ್ಪ ಲಿಲ್ಲ. ಕೊಠಡಿಗೆ ತೆರಳುವ ಗಡುವು ಮುಗಿದಿದ್ದರಿಂದ ಹೊರಗೆ ಕಳಿಸ ಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಲು ವಿದ್ಯಾರ್ಥಿಗಳು ನಿರಾಕರಿಸಿದರು.</p>.<p>ಹಿಜಾಬ್ಗಾಗಿ ಕಾನೂನು ಹೋರಾಟ ನಡೆಸುತ್ತಿರುವವರಲ್ಲಿ ಇಬ್ಬರು ವಾಣಿಜ್ಯ ವಿಭಾಗ, ನಾಲ್ವರು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರು. ಹಿಂದೆ ಆಂತರಿಕ ಪರೀಕ್ಷೆಗಳಿಗೆ ಎಲ್ಲರೂ ಗೈರಾಗಿದ್ದರು. ಈಗ ವಾರ್ಷಿಕ ಪರೀಕ್ಷೆಯ ಮೊದಲ ದಿನವೇ ಅಲಿಯಾ ಅಸಾದಿ, ರೇಶಮ್ ಗೈರಾಗಿದ್ದಾರೆ.</p>.<p><strong>ದ.ಕ. ಜಿಲ್ಲೆಯಲ್ಲಿ ಗೊಂದಲವಿಲ್ಲ: </strong>ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಹಿಜಾಬ್, ಬುರ್ಖಾ ಧರಿಸಿಕೊಂಡು ಬಂದಿದ್ದ ವರೂ ಅದನ್ನು ತೆಗೆದು ಪರೀಕ್ಷೆಗೆ ಹಾಜರಾದರು.</p>.<p>ಮಂಗಳೂರಿನ ರಥಬೀದಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿನಿಯೊಬ್ಬರು ರಸ್ತೆ ಬದಿ ಯಲ್ಲಿಯೇ ಬುರ್ಖಾ ತೆಗೆಯುತ್ತಿರುವುದು ಕಂಡು ಬಂದಿದೆ. ವಿದ್ಯಾರ್ಥಿನಿಯರಿಗೆ ಬುರ್ಖಾ, ಹಿಜಾಬ್ ತೆಗೆಯಲು ಕೊಠಡಿ ವ್ಯವಸ್ಥೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.</p>.<p>ಶಾಸಕ ರಘುಪತಿ ಭಟ್ ಖಂಡನೆ: ‘ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿನಿಯರು ಹೈಕೋರ್ಟ್ಗಿಂತ ದೊಡ್ಡವರಲ್ಲ. ನ್ಯಾಯಾಂಗ ನಿಂದನೆ ಆರೋಪದಡಿ ವಿದ್ಯಾರ್ಥಿನಿಯರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು’ ಎಂದು ಶಾಸಕ ರಘುಪತಿ ಭಟ್ ಒತ್ತಾಯಿಸಿದರು.</p>.<p><strong>ಹಿಜಾಬ್: ಉಪನ್ಯಾಸಕಿಗೆ ನಿರ್ಬಂಧ</strong></p>.<p><strong>ಮಡಿಕೇರಿ: </strong>ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಲು ಹಿಜಾಬ್ ಧರಿಸಿ ಬಂದಿದ್ದ ನಗರದ ಮಡಿಕೇರಿಯ ರಾಜೇಶ್ವರಿ ಕಾಲೇಜಿನ ಉಪನ್ಯಾಸಕಿ ಅನಿಷತ್ ಅವರನ್ನು ಪರೀಕ್ಷಾ ಕೇಂದ್ರದೊಳಕ್ಕೆ ಬಿಡದೆ ವಾಪಸು ಕಳಿಸಲಾಯಿತು.</p>.<p>ಕಿರಿಯ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಅವರು, ‘ಭಯ, ಆತಂಕ ವಿಲ್ಲದೇ ಪರೀಕ್ಷೆ ಬರೆಯಿರಿ’ ಎಂದು ತಮ್ಮ ವಿದ್ಯಾರ್ಥಿಗಳಿಗೆ ಹೇಳುತ್ತಿದ್ದರು. ಕೇಂದ್ರ ಪ್ರವೇಶಿಸದಂತೆ ತಡೆದ ಸಿಬ್ಬಂದಿ ಹೊರಕ್ಕೆ ಕಳುಹಿಸಿದರು.</p>.<p><strong>‘ಅಪ್ಪ ಬುದ್ಧಿ ಹೇಳಿದ್ರೂ ಕೇಳಲಿಲ್ಲ...’</strong></p>.<p>ಚಿಕ್ಕಬಳ್ಳಾಪುರ: ಹಿಜಾಬ್ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿ ನೂರ್ ಮಿಸ್ಬಾಕ್ವಾನೈನ್ ಪ್ರಾಂಶುಪಾಲರು, ಪೋಷಕರ ಮನವೊಲಿಕೆಗೂ ಸ್ಪಂದಿಸದೇ ಸರ್ ಎಂ.ವಿಶ್ವೇಶ್ವರಯ್ಯ ಪಿಯು ಕಾಲೇಜು ಕೇಂದ್ರದಿಂದ ಹೊರನಡೆದರು.</p>.<p>ಚಿಕ್ಕಬಳ್ಳಾಪುರದ ಬ್ಲೂಮ್ಸ್ ಕಾಲೇಜಿನ ವಿದ್ಯಾರ್ಥಿನಿಯಾದ ಇವರು ಇಬ್ಬರು ಗೆಳತಿಯರ ಜತೆ ಬಂದಿದ್ದರು.</p>.<p>ಸಿಬ್ಬಂದಿಯ ಮಾತು ಕೇಳಿ ಸ್ನೇಹಿತೆಯರು ಹಿಜಾಬ್ ತೆಗೆರಿಸಿದರು. </p>.<p>‘ನಾನು ಹಿಜಾಬ್ ತೆಗೆಯುವು ದಿಲ್ಲ. ಹಿಜಾಬ್ ತೆಗೆದರೆ ಪರೀಕ್ಷೆ ಬರೆಯಲು ಆಗುವುದಿಲ್ಲ’ ಎಂದು ವಿದ್ಯಾರ್ಥಿನಿ ಹೇಳಿದಳು.</p>.<p>ಪ್ರಾಂಶುಪಾಲರು, ಡಿಡಿಪಿಯು ಅಲ್ಲದೆ ಆಕೆಯ ಅಪ್ಪ ಹೇಳಿದರೂ ಕೇಳಲಿಲ್ಲ’ ಎಂದು ಕೇಂದ್ರದ ಸಿಬ್ಬಂದಿ ತಿಳಿಸಿದರು.</p>.<p><strong>10,830 ವಿದ್ಯಾರ್ಥಿಗಳು ಗೈರು</strong></p>.<p><strong>ಬೆಂಗಳೂರು: </strong>ಕೋವಿಡ್-19 ಕಾರಣಕ್ಕೆ ಒಂದು ವರ್ಷದ ಅಂತರದ ಬಳಿಕ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬಹುತೇಕ ಸುಸೂತ್ರವಾಗಿ ಆರಂಭವಾಗಿದೆ.</p>.<p>ಕೋವಿಡ್ ಕಾರಣ ಕಳೆದ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿರಲಿಲ್ಲ. ಈ ಸಾಲಿನಲ್ಲಿ ಕೋವಿಡ್ ಭೀತಿ ಕಡಿಮೆಯಾಗಿರುವ ಕಾರಣ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.</p>.<p>ಮೊದಲ ದಿನವಾದ ಶುಕ್ರವಾರ, ತರ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ಪರೀಕ್ಷೆಗಳು ನಡೆದವು. ಈ ವಿಷಯಗಳಿಗೆ ನೋಂದಾಯಿಸಿಕೊಂಡಿದ್ದ ಒಟ್ಟು 2.36 ಲಕ್ಷ ವಿದ್ಯಾರ್ಥಿಗಳಲ್ಲಿ 10,830 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.</p>.<p>ವ್ಯವಹಾರಗಳ ಅಧ್ಯಯನ ವಿಷಯಕ್ಕೆ 2,35,498 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 10,762 ಮಂದಿ ಗೈರು ಹಾಜರಾಗಿದ್ದರು. ಇವರಲ್ಲಿ 7,795 ಹೊಸ ವಿದ್ಯಾರ್ಥಿಗಳಾಗಿದ್ದು, 475 ವಿದ್ಯಾರ್ಥಿಗಳು ಖಾಸಗಿ ಮತ್ತು 2,492 ಪುನರಾವರ್ತಿತರು ಸೇರಿದ್ದಾರೆ.</p>.<p>ತರ್ಕಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿದ್ದ 621ವಿದ್ಯಾರ್ಥಿಗಳಲ್ಲಿ 68 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಇವರಲ್ಲಿ 61 ವಿದ್ಯಾರ್ಥಿಗಳು ಹೊಸಬರು, 6 ಪುನರಾ ವರ್ತಿತ ಅಭ್ಯರ್ಥಿಗಳು, ಇಬ್ಬರು ಖಾಸಗಿಯವರು ಸೇರಿದ್ದಾರೆ.</p>.<p>ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆಯಲ್ಲಿ ಅತಿ ಹೆಚ್ಚಿನ 1,220 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 1,204 ವಿದ್ಯಾರ್ಥಿ ಗಳು ಗೈರು ಹಾಜರಾಗಿದ್ದಾರೆ.</p>.<p>‘ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಇದರಿಂದ, ಹಲವು ವಿದ್ಯಾರ್ಥಿಗಳು ತರಗತಿಗಳಿಗೆ ಸರಿಯಾಗಿ ಹಾಜರಾಗಿಲ್ಲ. ಇದು ಸಹ ಒಂದು ಕಾರಣವಾಗಿದೆ’ ಎಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗೇಗೌಡ ಅಭಿಪ್ರಾಯಪಟ್ಟಿದ್ದಾರೆ.</p>.<p>ಈ ಬಾರಿ ಪ್ರಶ್ನೆಪತ್ರಿಕೆ ಸುಲಭವಾಗಿತ್ತು ಎಂದು ಹಲವು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ.</p>.<p><strong>‘ಎಳೆದು ತರಲು ಸಾಧ್ಯವಿಲ್ಲ’</strong></p>.<p><strong>ಚಿಕ್ಕಮಗಳೂರು: </strong>‘ಉಡುಪಿಯ ಆರು ವಿದ್ಯಾರ್ಥಿನಿಯರು ಹಿಜಾಬ್ಗಾಗಿ ಪಟ್ಟುಹಿಡಿದಿದ್ದಾರೆ. ಪರೀಕ್ಷೆಗೆ ಹಾಜರಾಗುವುದು, ಬಿಡುವುದು ಅವರಿಗೆ ಬಿಟ್ಟಿದ್ದು, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಎಳೆದು ತರಲು ಸಾಧ್ಯವಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಸ್ಲಿಂ ಸಮುದಾಯದ ಬಹುತೇಕ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಆರು ವಿದ್ಯಾರ್ಥಿಗಳು ಯಾರಿಂದಲೋ ಪ್ರೇರಿತವಾಗಿ ಹೀಗೆ ಮಾಡುತ್ತಿದ್ದಾರೆ. ಇದರಲ್ಲಿ ಹೊರಗಿನ ಶಕ್ತಿಯ ಕೈವಾಡ ಇದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕಾರಣಕ್ಕೆ ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರಾದ ಅಲಿಯಾ ಅಸಾದಿ ಹಾಗೂ ರೇಶಮ್ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದೆ ಮನೆಗೆ ವಾಪಸಾದರು.</p>.<p>ಚಿಕ್ಕಬಳ್ಳಾಪುರದಸರ್ ಎಂ.ವಿಶ್ವೇಶ್ವರಯ್ಯ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಿಂದಲೂ, ಹಿಜಾಬ್ ತೆರೆಯಲು ನಿರಾಕರಿಸಿದ ವಿದ್ಯಾರ್ಥಿನಿ ನೂರ್ ಮಿಸ್ಬಾ ಕ್ವಾನೈನ್ ಅವರು ಪರೀಕ್ಷಾ ಕೇಂದ್ರದಿಂದ ಹೊರನಡೆದಿದ್ದಾರೆ.</p>.<p>ಉಡುಪಿಯಲ್ಲಿ ತಹಶೀಲ್ದಾರ್ ಅರ್ಚನಾ ಭಟ್ ಮತ್ತು ಕಾಲೇಜು ಪ್ರಾಂಶುಪಾಲರು ಮನವೊಲಿಸಲು ಯತ್ನಿಸಿದರೂ ವಿದ್ಯಾರ್ಥಿನಿಯರು ಒಪ್ಪ ಲಿಲ್ಲ. ಕೊಠಡಿಗೆ ತೆರಳುವ ಗಡುವು ಮುಗಿದಿದ್ದರಿಂದ ಹೊರಗೆ ಕಳಿಸ ಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಲು ವಿದ್ಯಾರ್ಥಿಗಳು ನಿರಾಕರಿಸಿದರು.</p>.<p>ಹಿಜಾಬ್ಗಾಗಿ ಕಾನೂನು ಹೋರಾಟ ನಡೆಸುತ್ತಿರುವವರಲ್ಲಿ ಇಬ್ಬರು ವಾಣಿಜ್ಯ ವಿಭಾಗ, ನಾಲ್ವರು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರು. ಹಿಂದೆ ಆಂತರಿಕ ಪರೀಕ್ಷೆಗಳಿಗೆ ಎಲ್ಲರೂ ಗೈರಾಗಿದ್ದರು. ಈಗ ವಾರ್ಷಿಕ ಪರೀಕ್ಷೆಯ ಮೊದಲ ದಿನವೇ ಅಲಿಯಾ ಅಸಾದಿ, ರೇಶಮ್ ಗೈರಾಗಿದ್ದಾರೆ.</p>.<p><strong>ದ.ಕ. ಜಿಲ್ಲೆಯಲ್ಲಿ ಗೊಂದಲವಿಲ್ಲ: </strong>ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಹಿಜಾಬ್, ಬುರ್ಖಾ ಧರಿಸಿಕೊಂಡು ಬಂದಿದ್ದ ವರೂ ಅದನ್ನು ತೆಗೆದು ಪರೀಕ್ಷೆಗೆ ಹಾಜರಾದರು.</p>.<p>ಮಂಗಳೂರಿನ ರಥಬೀದಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿನಿಯೊಬ್ಬರು ರಸ್ತೆ ಬದಿ ಯಲ್ಲಿಯೇ ಬುರ್ಖಾ ತೆಗೆಯುತ್ತಿರುವುದು ಕಂಡು ಬಂದಿದೆ. ವಿದ್ಯಾರ್ಥಿನಿಯರಿಗೆ ಬುರ್ಖಾ, ಹಿಜಾಬ್ ತೆಗೆಯಲು ಕೊಠಡಿ ವ್ಯವಸ್ಥೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.</p>.<p>ಶಾಸಕ ರಘುಪತಿ ಭಟ್ ಖಂಡನೆ: ‘ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿನಿಯರು ಹೈಕೋರ್ಟ್ಗಿಂತ ದೊಡ್ಡವರಲ್ಲ. ನ್ಯಾಯಾಂಗ ನಿಂದನೆ ಆರೋಪದಡಿ ವಿದ್ಯಾರ್ಥಿನಿಯರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು’ ಎಂದು ಶಾಸಕ ರಘುಪತಿ ಭಟ್ ಒತ್ತಾಯಿಸಿದರು.</p>.<p><strong>ಹಿಜಾಬ್: ಉಪನ್ಯಾಸಕಿಗೆ ನಿರ್ಬಂಧ</strong></p>.<p><strong>ಮಡಿಕೇರಿ: </strong>ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಲು ಹಿಜಾಬ್ ಧರಿಸಿ ಬಂದಿದ್ದ ನಗರದ ಮಡಿಕೇರಿಯ ರಾಜೇಶ್ವರಿ ಕಾಲೇಜಿನ ಉಪನ್ಯಾಸಕಿ ಅನಿಷತ್ ಅವರನ್ನು ಪರೀಕ್ಷಾ ಕೇಂದ್ರದೊಳಕ್ಕೆ ಬಿಡದೆ ವಾಪಸು ಕಳಿಸಲಾಯಿತು.</p>.<p>ಕಿರಿಯ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಅವರು, ‘ಭಯ, ಆತಂಕ ವಿಲ್ಲದೇ ಪರೀಕ್ಷೆ ಬರೆಯಿರಿ’ ಎಂದು ತಮ್ಮ ವಿದ್ಯಾರ್ಥಿಗಳಿಗೆ ಹೇಳುತ್ತಿದ್ದರು. ಕೇಂದ್ರ ಪ್ರವೇಶಿಸದಂತೆ ತಡೆದ ಸಿಬ್ಬಂದಿ ಹೊರಕ್ಕೆ ಕಳುಹಿಸಿದರು.</p>.<p><strong>‘ಅಪ್ಪ ಬುದ್ಧಿ ಹೇಳಿದ್ರೂ ಕೇಳಲಿಲ್ಲ...’</strong></p>.<p>ಚಿಕ್ಕಬಳ್ಳಾಪುರ: ಹಿಜಾಬ್ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿ ನೂರ್ ಮಿಸ್ಬಾಕ್ವಾನೈನ್ ಪ್ರಾಂಶುಪಾಲರು, ಪೋಷಕರ ಮನವೊಲಿಕೆಗೂ ಸ್ಪಂದಿಸದೇ ಸರ್ ಎಂ.ವಿಶ್ವೇಶ್ವರಯ್ಯ ಪಿಯು ಕಾಲೇಜು ಕೇಂದ್ರದಿಂದ ಹೊರನಡೆದರು.</p>.<p>ಚಿಕ್ಕಬಳ್ಳಾಪುರದ ಬ್ಲೂಮ್ಸ್ ಕಾಲೇಜಿನ ವಿದ್ಯಾರ್ಥಿನಿಯಾದ ಇವರು ಇಬ್ಬರು ಗೆಳತಿಯರ ಜತೆ ಬಂದಿದ್ದರು.</p>.<p>ಸಿಬ್ಬಂದಿಯ ಮಾತು ಕೇಳಿ ಸ್ನೇಹಿತೆಯರು ಹಿಜಾಬ್ ತೆಗೆರಿಸಿದರು. </p>.<p>‘ನಾನು ಹಿಜಾಬ್ ತೆಗೆಯುವು ದಿಲ್ಲ. ಹಿಜಾಬ್ ತೆಗೆದರೆ ಪರೀಕ್ಷೆ ಬರೆಯಲು ಆಗುವುದಿಲ್ಲ’ ಎಂದು ವಿದ್ಯಾರ್ಥಿನಿ ಹೇಳಿದಳು.</p>.<p>ಪ್ರಾಂಶುಪಾಲರು, ಡಿಡಿಪಿಯು ಅಲ್ಲದೆ ಆಕೆಯ ಅಪ್ಪ ಹೇಳಿದರೂ ಕೇಳಲಿಲ್ಲ’ ಎಂದು ಕೇಂದ್ರದ ಸಿಬ್ಬಂದಿ ತಿಳಿಸಿದರು.</p>.<p><strong>10,830 ವಿದ್ಯಾರ್ಥಿಗಳು ಗೈರು</strong></p>.<p><strong>ಬೆಂಗಳೂರು: </strong>ಕೋವಿಡ್-19 ಕಾರಣಕ್ಕೆ ಒಂದು ವರ್ಷದ ಅಂತರದ ಬಳಿಕ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬಹುತೇಕ ಸುಸೂತ್ರವಾಗಿ ಆರಂಭವಾಗಿದೆ.</p>.<p>ಕೋವಿಡ್ ಕಾರಣ ಕಳೆದ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿರಲಿಲ್ಲ. ಈ ಸಾಲಿನಲ್ಲಿ ಕೋವಿಡ್ ಭೀತಿ ಕಡಿಮೆಯಾಗಿರುವ ಕಾರಣ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.</p>.<p>ಮೊದಲ ದಿನವಾದ ಶುಕ್ರವಾರ, ತರ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ಪರೀಕ್ಷೆಗಳು ನಡೆದವು. ಈ ವಿಷಯಗಳಿಗೆ ನೋಂದಾಯಿಸಿಕೊಂಡಿದ್ದ ಒಟ್ಟು 2.36 ಲಕ್ಷ ವಿದ್ಯಾರ್ಥಿಗಳಲ್ಲಿ 10,830 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.</p>.<p>ವ್ಯವಹಾರಗಳ ಅಧ್ಯಯನ ವಿಷಯಕ್ಕೆ 2,35,498 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 10,762 ಮಂದಿ ಗೈರು ಹಾಜರಾಗಿದ್ದರು. ಇವರಲ್ಲಿ 7,795 ಹೊಸ ವಿದ್ಯಾರ್ಥಿಗಳಾಗಿದ್ದು, 475 ವಿದ್ಯಾರ್ಥಿಗಳು ಖಾಸಗಿ ಮತ್ತು 2,492 ಪುನರಾವರ್ತಿತರು ಸೇರಿದ್ದಾರೆ.</p>.<p>ತರ್ಕಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿದ್ದ 621ವಿದ್ಯಾರ್ಥಿಗಳಲ್ಲಿ 68 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಇವರಲ್ಲಿ 61 ವಿದ್ಯಾರ್ಥಿಗಳು ಹೊಸಬರು, 6 ಪುನರಾ ವರ್ತಿತ ಅಭ್ಯರ್ಥಿಗಳು, ಇಬ್ಬರು ಖಾಸಗಿಯವರು ಸೇರಿದ್ದಾರೆ.</p>.<p>ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆಯಲ್ಲಿ ಅತಿ ಹೆಚ್ಚಿನ 1,220 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 1,204 ವಿದ್ಯಾರ್ಥಿ ಗಳು ಗೈರು ಹಾಜರಾಗಿದ್ದಾರೆ.</p>.<p>‘ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಇದರಿಂದ, ಹಲವು ವಿದ್ಯಾರ್ಥಿಗಳು ತರಗತಿಗಳಿಗೆ ಸರಿಯಾಗಿ ಹಾಜರಾಗಿಲ್ಲ. ಇದು ಸಹ ಒಂದು ಕಾರಣವಾಗಿದೆ’ ಎಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗೇಗೌಡ ಅಭಿಪ್ರಾಯಪಟ್ಟಿದ್ದಾರೆ.</p>.<p>ಈ ಬಾರಿ ಪ್ರಶ್ನೆಪತ್ರಿಕೆ ಸುಲಭವಾಗಿತ್ತು ಎಂದು ಹಲವು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ.</p>.<p><strong>‘ಎಳೆದು ತರಲು ಸಾಧ್ಯವಿಲ್ಲ’</strong></p>.<p><strong>ಚಿಕ್ಕಮಗಳೂರು: </strong>‘ಉಡುಪಿಯ ಆರು ವಿದ್ಯಾರ್ಥಿನಿಯರು ಹಿಜಾಬ್ಗಾಗಿ ಪಟ್ಟುಹಿಡಿದಿದ್ದಾರೆ. ಪರೀಕ್ಷೆಗೆ ಹಾಜರಾಗುವುದು, ಬಿಡುವುದು ಅವರಿಗೆ ಬಿಟ್ಟಿದ್ದು, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಎಳೆದು ತರಲು ಸಾಧ್ಯವಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಸ್ಲಿಂ ಸಮುದಾಯದ ಬಹುತೇಕ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಆರು ವಿದ್ಯಾರ್ಥಿಗಳು ಯಾರಿಂದಲೋ ಪ್ರೇರಿತವಾಗಿ ಹೀಗೆ ಮಾಡುತ್ತಿದ್ದಾರೆ. ಇದರಲ್ಲಿ ಹೊರಗಿನ ಶಕ್ತಿಯ ಕೈವಾಡ ಇದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>