ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ‘ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಕೆಲವು ಹಿಂದೂ ಕಾರ್ಯಕರ್ತರು ಮನವಿ ನೀಡಿದ್ದಾರೆ. ಆದರೆ, ಸರ್ಕಾರದ ನೀತಿ ನಿಯಮಗಳು ಹಾಗೂ ಸಂವಿಧಾನಕ್ಕೆ ಬದ್ಧವಾಗಿ ನಡೆದುಕೊಳ್ಳಬೇಕಿರುವುದರಿಂದ ಜಾತ್ಯತೀತ ರಾಷ್ಟ್ರದಲ್ಲಿ ಮತ ಬೇಧ ಮಾಡುವಂತಿಲ್ಲ’ ಎಂದು ಸ್ಪಷ್ಟಪಡಿಸಿದರು.