ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಮುಸ್ಲಿಂ, ಕ್ರಿಶ್ಚಿಯನ್ ಸಂಘಟನೆಗಳಿಂದ ಬೆದರಿಕೆಯಿಲ್ಲ. ಆದರೆ, ರಾಜ್ಯ ಬಿಜೆಪಿ ಮತ್ತು ಬಿಜೆಪಿ ಸರ್ಕಾರವೇ ನನಗೆ ತೊಂದರೆ ಕೊಡುತ್ತಿದೆ. ಹಿಂದುತ್ವದ ಹೆಸರಿನಲ್ಲಿ ರಾಜ್ಯ ಬಿಜೆಪಿ ನಾಯಕರು ಹಿಂದುತ್ವ ಕಾರ್ಯಕರ್ತರನ್ನು ಬಲಿ ತೆಗೆದುಕೊಳ್ಳುತ್ತಿದ್ದಾರೆ. ಅಂತಹ ನಾಯಕರನ್ನು ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಕೆಳಗಿಳಿಸಲು ಹಿಂದುತ್ವ ಕಾರ್ಯಕರ್ತರಿಗೆ ಗೊತ್ತಿದೆ’ ಎಂದರು.