ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಆಶ್ರಯದಲ್ಲಿ ಸ್ಥಳೀಯ ದುರ್ಗಾ ಮಿತ್ರವೃಂದ, ದುರ್ಗಾ ಸೇವಾ ಸಮಿತಿ ಸಹಯೋಗದಲ್ಲಿ ನಡೆದ ಬೆಂಗಳೂರಿನ ಇತಿಹಾಸ ಅಕಾಡೆಮಿಯ ‘ಐತಿಹಾಸಿಕ ಪರಂಪರೆ ಉಳಿಸಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ನಮ್ಮಲ್ಲಿ ಲಭ್ಯವಿರುವ ಪುರಾತನ ವಸ್ತುಗಳು, ಶಿಲಾ ಶಾಸನಗಳು, ತಾಮ್ರಪಟಗಳು, ಕಟ್ಟಡಗಳು, ಪುರಾತನ ಕಡತಗಳು, ನಾಣ್ಯಗಳು ಗತ ಇತಿಹಾಸವನ್ನು ಹೇಳುತ್ತವೆ. ಇಂತಹ ಅಮೂಲ್ಯ ಪುರಾತನ ಉಳಿಕೆಗಳು ಕಾಲಕಾರಣವಾಗಿ ಅಥವಾ ಮಾನವ ನಿರ್ಲಕ್ಷ್ಯದಿಂದ ನಾಶವಾಗದಂತೆ ರಕ್ಷಿಸುವ ಜಾಗೃತಿ ಮೂಡಿಸುವ ಕಾರ್ಯಕ್ರಮವೇ ಐತಿಹಾಸಿಕ ಪರಂಪರೆ ಉಳಿಸಿ ಅಭಿಯಾನ’ ಎಂದು ವಿವರಿಸಿದರು.