<p><strong>ಉಡುಪಿ:</strong> ಸ್ವಯಂಸೇವಕರಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರ ಕಾರ್ಯವೈಖರಿ ಶ್ಲಾಘನೀಯ ಎಂದು ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಹೇಳಿದರು.</p>.<p>ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಶನಿವಾರ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ಯುವಜನತೆಯು ತಂಬಾಕು, ಮಾದಕ ದ್ರವ್ಯ ಸೇವನೆಯಂತಹ ದುಷ್ಚಟಗಳ ದಾಸರಾಗುತ್ತಿದ್ದು, ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ವಯಸ್ಕರು ಜೀವನ ಶೈಲಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗೃಹರಕ್ಷಕರು ತಾವು ಕಾರ್ಯ ನಿರ್ವಹಿಸುವ ಹಳ್ಳಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಂಡು ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಬೇಕು ಎಂದರು.</p>.<p>ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್.ನಾಯ್ಕ್ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರು ಸಮಾಜಕ್ಕೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಅವರ ಕಾರ್ಯ ಇತರರಿಗೂ ಮಾದರಿಯಾಗಲಿ ಎಂದರು.<br /><br />ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗೃಹರಕ್ಷಕರಾದ ಶಶಿಕಿರಣ್, ಅನಿಲ್ ಥಾಮಸ್, ಜಯಂತಿ, ಸಂಧ್ಯಾ, ಲತಾ ಮತ್ತು ದಿನೇಶ್ ಅವರನ್ನು ಸನ್ಮಾನಿಸಲಾಯಿತು.</p>.<p>ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ರತ್ನಾಕರ್ ಸನ್ಮಾನಿತರ ವಿವರ ವಾಚಿಸಿದರು. ಬ್ರಹ್ಮಾವರ ಘಟಕ ಪ್ಲಾಟೂನ್ ಕಮಾಂಡರ್ ಸ್ಟೀವನ್ ಪ್ರಕಾಶ್ ಲೂವಿಸ್ ನಿರೂಪಿಸಿದರು. ಪ್ರಭಾಕರ್ ಸುವರ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸ್ವಯಂಸೇವಕರಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರ ಕಾರ್ಯವೈಖರಿ ಶ್ಲಾಘನೀಯ ಎಂದು ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಹೇಳಿದರು.</p>.<p>ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಶನಿವಾರ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ಯುವಜನತೆಯು ತಂಬಾಕು, ಮಾದಕ ದ್ರವ್ಯ ಸೇವನೆಯಂತಹ ದುಷ್ಚಟಗಳ ದಾಸರಾಗುತ್ತಿದ್ದು, ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ವಯಸ್ಕರು ಜೀವನ ಶೈಲಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗೃಹರಕ್ಷಕರು ತಾವು ಕಾರ್ಯ ನಿರ್ವಹಿಸುವ ಹಳ್ಳಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಂಡು ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಬೇಕು ಎಂದರು.</p>.<p>ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್.ನಾಯ್ಕ್ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರು ಸಮಾಜಕ್ಕೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಅವರ ಕಾರ್ಯ ಇತರರಿಗೂ ಮಾದರಿಯಾಗಲಿ ಎಂದರು.<br /><br />ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗೃಹರಕ್ಷಕರಾದ ಶಶಿಕಿರಣ್, ಅನಿಲ್ ಥಾಮಸ್, ಜಯಂತಿ, ಸಂಧ್ಯಾ, ಲತಾ ಮತ್ತು ದಿನೇಶ್ ಅವರನ್ನು ಸನ್ಮಾನಿಸಲಾಯಿತು.</p>.<p>ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ರತ್ನಾಕರ್ ಸನ್ಮಾನಿತರ ವಿವರ ವಾಚಿಸಿದರು. ಬ್ರಹ್ಮಾವರ ಘಟಕ ಪ್ಲಾಟೂನ್ ಕಮಾಂಡರ್ ಸ್ಟೀವನ್ ಪ್ರಕಾಶ್ ಲೂವಿಸ್ ನಿರೂಪಿಸಿದರು. ಪ್ರಭಾಕರ್ ಸುವರ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>