<p><strong>ಉಡುಪಿ:</strong> ಕಾನೂನು ಮತ್ತು ಸುವ್ಯವಸ್ಥೆ, ಪ್ರವಾಹ ಪರಿಸ್ಥಿತಿ ಮೊದಲಾದ ತುರ್ತು ಸಂದರ್ಭಗಳಲ್ಲಿ ಮೊದಲು ನೆನಪಿಗೆ ಬರುವವರೇ ಗೃಹರಕ್ಷಕ ಸಿಬ್ಬಂದಿ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು.</p>.<p>ನಗರದ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೊಲೀಸ್ ಇಲಾಖೆಯ ಜೊತೆ ಜೊತೆಯಾಗಿ ಕೆಲಸ ಮಾಡುವ ಗೃಹರಕ್ಷಕ ಸಿಬ್ಬಂದಿ ಕೆಲವೊಂದು ಸಂದರ್ಭಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ಅವರ ಕಾರ್ಯ ಶ್ಲಾಘನೀಯ ಎಂದರು.</p>.<p>ಚುನಾವಣೆಗಳ ಸಂದರ್ಭಗಳಲ್ಲೂ ಪೊಲೀಸ್ ಇಲಾಖೆಯೊಂದಿಗೆ ಸೇರಿ ಕೆಲಸ ನಿರ್ವಹಿಸುವ ಮೂಲಕ ಗೃಹರಕ್ಷಕ ಸಿಬ್ಬಂದಿಯು ಜಿಲ್ಲಾಡಳಿತಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಮಾತನಾಡಿ, ಬಂದೋಬಸ್ತ್ ಸೇರಿದಂತೆ ವಿವಿಧ ಕೆಲಸಗಳಲ್ಲಿ ನಮಗೆ ಸಹಕಾರ ನೀಡುವವರೇ ಗೃಹರಕ್ಷಕರು. ಅವರಿಗೆ ಸದಾ ನಮ್ಮ ಬೆಂಬಲವಿದೆ ಎಂದರು.</p>.<p>ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ರೋಶನ್ ಕುಮಾರ್ ಶೆಟ್ಟಿ ಮಾತನಾಡಿ, ಉಡುಪಿ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗೃಹರಕ್ಷಕರ ಕೊರತೆ ಇದೆ. ಜಿಲ್ಲೆಯಲ್ಲಿ ಗೃಹರಕ್ಷಕರ 500 ಹುದ್ದೆಗಳು ಭರ್ತಿಯಾಗದ ಕಾರಣ ಈಚೆಗೆ ಹುದ್ದೆಗಳ ಸಂಖ್ಯೆಯನ್ನು 400ಕ್ಕೆ ಇಳಿಸಲಾಗಿದೆ ಎಂದು ಹೇಳಿದರು.</p>.<p>ಮಲ್ಪೆ ಬೀಚ್ನಲ್ಲಿ ಕಾರ್ಯ ನಿರ್ವಹಿಸಲು ಗೃಹರಕ್ಷಕ ದಳದ ಸಿಬ್ಬಂದಿಗೆ ಜಿಲ್ಲಾಧಿಕಾರಿಯವರು ಅವಕಾಶ ಮಾಡಿಕೊಟ್ಟಿದ್ದಾರೆ. ಬೀಚ್ಗಳಲ್ಲಿ ಕಾರ್ಯ ನಿರ್ವಹಿಸುವ ನಮ್ಮ ಸಿಬ್ಬಂದಿಗೆ ಈಜು ತರಬೇತಿಯನ್ನೂ ನೀಡಲಾಗುತ್ತಿದೆ. ಶೀಘ್ರ 40ರಿಂದ 45ರಷ್ಟು ಗೃಹರಕ್ಷಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.</p>.<p>ಗೃಹರಕ್ಷಕ ಸಿಬ್ಬಂದಿಗೆ ಮಣಿಪಾಲದ ಆರೋಗ್ಯ ಕಾರ್ಡ್ ನೀಡುವಂತೆ ಮನವಿ ಮಾಡಿದ್ದೇವೆ. ಅದಕ್ಕೆ ಮಣಿಪಾಲದ ಕೆಎಂಸಿಯವರು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಸಾಧಕ ಗೃಹರಕ್ಷಕರಾದ ಶಿವಪ್ರಸಾದ್, ವಿಜಯ ಕುಮಾರ್, ಪುರ್ಣಿಮಾ, ವಿಲ್ಮಾ ಜ್ಯೋತಿ ರೋಡ್ರಿಗಸ್ ಅವರನ್ನು ಸನ್ಮಾನಿಸಲಾಯಿತು.</p>.<p>ಸೆಕೆಂಡ್ ಇನ್ ಕಮಾಂಡ್ ಕೆ.ಸಿ. ರಾಜೇಶ್ ಸ್ವಾಗತಿಸಿದರು. ರತ್ನಾಕರ್ ಎಂ. ಸನ್ಮಾನಿತರ ವಿವರ ವಾಚಿಸಿದರು. ಕಾರ್ಯಕ್ರಮದಲ್ಲಿ ಗೃಹರಕ್ಷಕ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಯಂತಿ ಪ್ರಾರ್ಥಿಸಿದರು. ಸ್ಟೀವನ್ ಪ್ರಕಾಶ್ ಲೂವಿಸ್ ನಿರೂಪಿಸಿದರು. ಪ್ರಭಾಕರ ಸುವರ್ಣ ವಂದಿಸಿದರು.</p>.<div><blockquote>ಪೊಲೀಸ್ ಇಲಾಖೆಗೆ ಅತ್ಯಂತ ನಿಕಟವಾಗಿರುವ ಗೃಹರಕ್ಷಕರನ್ನು ಪೊಲೀಸ್ ಇಲಾಖೆಯ ಅಂಗವಾಗಿಯೇ ನಾವು ನೋಡುತ್ತೇವೆ </blockquote><span class="attribution">ಅರುಣ್ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕಾನೂನು ಮತ್ತು ಸುವ್ಯವಸ್ಥೆ, ಪ್ರವಾಹ ಪರಿಸ್ಥಿತಿ ಮೊದಲಾದ ತುರ್ತು ಸಂದರ್ಭಗಳಲ್ಲಿ ಮೊದಲು ನೆನಪಿಗೆ ಬರುವವರೇ ಗೃಹರಕ್ಷಕ ಸಿಬ್ಬಂದಿ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು.</p>.<p>ನಗರದ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೊಲೀಸ್ ಇಲಾಖೆಯ ಜೊತೆ ಜೊತೆಯಾಗಿ ಕೆಲಸ ಮಾಡುವ ಗೃಹರಕ್ಷಕ ಸಿಬ್ಬಂದಿ ಕೆಲವೊಂದು ಸಂದರ್ಭಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ಅವರ ಕಾರ್ಯ ಶ್ಲಾಘನೀಯ ಎಂದರು.</p>.<p>ಚುನಾವಣೆಗಳ ಸಂದರ್ಭಗಳಲ್ಲೂ ಪೊಲೀಸ್ ಇಲಾಖೆಯೊಂದಿಗೆ ಸೇರಿ ಕೆಲಸ ನಿರ್ವಹಿಸುವ ಮೂಲಕ ಗೃಹರಕ್ಷಕ ಸಿಬ್ಬಂದಿಯು ಜಿಲ್ಲಾಡಳಿತಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಮಾತನಾಡಿ, ಬಂದೋಬಸ್ತ್ ಸೇರಿದಂತೆ ವಿವಿಧ ಕೆಲಸಗಳಲ್ಲಿ ನಮಗೆ ಸಹಕಾರ ನೀಡುವವರೇ ಗೃಹರಕ್ಷಕರು. ಅವರಿಗೆ ಸದಾ ನಮ್ಮ ಬೆಂಬಲವಿದೆ ಎಂದರು.</p>.<p>ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ರೋಶನ್ ಕುಮಾರ್ ಶೆಟ್ಟಿ ಮಾತನಾಡಿ, ಉಡುಪಿ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗೃಹರಕ್ಷಕರ ಕೊರತೆ ಇದೆ. ಜಿಲ್ಲೆಯಲ್ಲಿ ಗೃಹರಕ್ಷಕರ 500 ಹುದ್ದೆಗಳು ಭರ್ತಿಯಾಗದ ಕಾರಣ ಈಚೆಗೆ ಹುದ್ದೆಗಳ ಸಂಖ್ಯೆಯನ್ನು 400ಕ್ಕೆ ಇಳಿಸಲಾಗಿದೆ ಎಂದು ಹೇಳಿದರು.</p>.<p>ಮಲ್ಪೆ ಬೀಚ್ನಲ್ಲಿ ಕಾರ್ಯ ನಿರ್ವಹಿಸಲು ಗೃಹರಕ್ಷಕ ದಳದ ಸಿಬ್ಬಂದಿಗೆ ಜಿಲ್ಲಾಧಿಕಾರಿಯವರು ಅವಕಾಶ ಮಾಡಿಕೊಟ್ಟಿದ್ದಾರೆ. ಬೀಚ್ಗಳಲ್ಲಿ ಕಾರ್ಯ ನಿರ್ವಹಿಸುವ ನಮ್ಮ ಸಿಬ್ಬಂದಿಗೆ ಈಜು ತರಬೇತಿಯನ್ನೂ ನೀಡಲಾಗುತ್ತಿದೆ. ಶೀಘ್ರ 40ರಿಂದ 45ರಷ್ಟು ಗೃಹರಕ್ಷಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.</p>.<p>ಗೃಹರಕ್ಷಕ ಸಿಬ್ಬಂದಿಗೆ ಮಣಿಪಾಲದ ಆರೋಗ್ಯ ಕಾರ್ಡ್ ನೀಡುವಂತೆ ಮನವಿ ಮಾಡಿದ್ದೇವೆ. ಅದಕ್ಕೆ ಮಣಿಪಾಲದ ಕೆಎಂಸಿಯವರು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಸಾಧಕ ಗೃಹರಕ್ಷಕರಾದ ಶಿವಪ್ರಸಾದ್, ವಿಜಯ ಕುಮಾರ್, ಪುರ್ಣಿಮಾ, ವಿಲ್ಮಾ ಜ್ಯೋತಿ ರೋಡ್ರಿಗಸ್ ಅವರನ್ನು ಸನ್ಮಾನಿಸಲಾಯಿತು.</p>.<p>ಸೆಕೆಂಡ್ ಇನ್ ಕಮಾಂಡ್ ಕೆ.ಸಿ. ರಾಜೇಶ್ ಸ್ವಾಗತಿಸಿದರು. ರತ್ನಾಕರ್ ಎಂ. ಸನ್ಮಾನಿತರ ವಿವರ ವಾಚಿಸಿದರು. ಕಾರ್ಯಕ್ರಮದಲ್ಲಿ ಗೃಹರಕ್ಷಕ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಯಂತಿ ಪ್ರಾರ್ಥಿಸಿದರು. ಸ್ಟೀವನ್ ಪ್ರಕಾಶ್ ಲೂವಿಸ್ ನಿರೂಪಿಸಿದರು. ಪ್ರಭಾಕರ ಸುವರ್ಣ ವಂದಿಸಿದರು.</p>.<div><blockquote>ಪೊಲೀಸ್ ಇಲಾಖೆಗೆ ಅತ್ಯಂತ ನಿಕಟವಾಗಿರುವ ಗೃಹರಕ್ಷಕರನ್ನು ಪೊಲೀಸ್ ಇಲಾಖೆಯ ಅಂಗವಾಗಿಯೇ ನಾವು ನೋಡುತ್ತೇವೆ </blockquote><span class="attribution">ಅರುಣ್ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>