ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಪೂರಕ ವಾತಾವರಣವಿದ್ದು, ಅಧಿಕಾರಿಗಳು ಸರ್ಕಾರದ ಸೂಚನೆಗಳನ್ನು ಸಮರ್ಪಕ ಅನುಷ್ಠಾನ ಮಾಡಬೇಕಿದೆ. ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದ್ದು, ಸನ್ಮಾನ, ಸಮಾರಂಭ ಆಯೋಜನೆ ಮಾಡುವವರ ವಿರುದ್ಧ ಹಾಗೂ ಬಸ್ಗಳಲ್ಲಿ ಅಂತರ ಇಲ್ಲದಿದ್ದರೆ ಪ್ರಕರಣ ದಾಖಲಿಸಿ ಎಂದು ತಹಶೀಲ್ದಾರ್ಗಳಿಗೆ ಸೂಚಿಸಿದರು.