ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಸುಲಭವಾಗಿ ಆರೋಗ್ಯ ಸೇವೆ ಸಿಗುವ ದೃಷ್ಟಿಯಲ್ಲಿ ಕಟ್ಟಡದ ನೀಲನಕ್ಷೆ ತಯಾರಿಸಬೇಕು. ತುರ್ತು ಚಕಿತ್ಸಾ ಘಟಕ, ಹೊರರೋಗಿಗಳ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗ ಶಾಲೆ, ಡಯಾಲಿಸಿಸ್ ಕೇಂದ್ರ, ಐಸಿಯು ಕೇಂದ್ರಗಳು ನೆಲ ಮಹಡಿಯಲ್ಲೇ ನಿರ್ಮಿಸದರೆ ರೋಗಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಶಾಸಕರು ಸಲಹೆ ನೀಡಿದರು.