<p><strong>ಉಡುಪಿ</strong>: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕೋಮು ಸೌಹಾರ್ದ ಕಾಪಾಡುವ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದರೆ ಎಂದು ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.</p>.<p>ಪೊಲೀಸ್ ಅಧಿಕಾರಿಗಳು ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದ ವಿಷಯದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಒಕ್ಕೂಟವು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದೆ.</p>.<p>ವಿಚಾರಣೆ ನೆಪದಲ್ಲಿ ಹಿಂದೂ ಕಾರ್ಯಕರ್ತರಿಗೆ ಮಧ್ಯರಾತ್ರಿ ದೂರವಾಣಿ ಕರೆ ಮಾಡಿ, ನೋಟಿಸ್ ನೀಡದೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಯಲಾಗುತ್ತಿದೆ ಎಂದು ಒಕ್ಕೂಟ ಹೇಳಿದೆ.</p>.<p>ದಶಕಗಳಿಂದ ಯಾವುದೇ ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗದ ಕೂಲಿ ಕಾರ್ಮಿಕರು, ವಯಸ್ಸಾದವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದೆ.</p>.<p>ಹಿಂದೂ ಜನಜಾಗೃತಿ ಸಮಿತಿ ದಕ್ಷಿಣ ಕರ್ನಾಟಕ ಸಮನ್ವಯಕ ಚಂದ್ರ ಮೋಗವೀರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರಿಗೆ ಬೆದರಿಕೆಯ ಕರೆಗಳು ಬರುತ್ತಿದ್ದು, ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪಿಎಫ್ಐ ಸಂಘಟನೆಯ ಸದಸ್ಯರು ಅನ್ಯ ಸಂಘಟನೆಗಳ ಮೂಲಕ ಸಕ್ರಿಯರಾಗಿದ್ದು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಅವರ ಕೈವಾಡ ಇರುವ ಶಂಕೆ ಇದ್ದು, ಈ ಕುರಿತು ತನಿಖೆ ನಡೆಯಬೇಕು ಎಂದು ಹೇಳಿದರು.</p>.<p>ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆಯೊಡ್ಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದೂ ಅವರು ಒತ್ತಾಯಿಸಿದರು.</p>.<p>ಉಡುಪಿ ಅಭಿರಾಮ ಧಾಮ ಸಂಸ್ಥಾಪಕ ಸುದರ್ಶನ ಭಾರತೀಯ, ಹಿಂದೂ ಮಹಾ ಸಭಾದ ಪ್ರಮೋದ್ ಉಚ್ಚಿಲ, ಶ್ರೀರಾಮ ಸೇನೆ ಮುಖಂಡ ಜಯರಾಂ ಅಂಬೇಕಲ್ಲು, ಗುರುಪ್ರಸಾದ್ ಶೆಣೈ, ರಾಜೇಶ್ ಶೇಟ್, ರಾಘವೇಂದ್ರ ಆಚಾರ್ಯ, ನಾಗರಾಜ್, ಸೀತಾರಾಮ್ ಭಟ್, ಉಮೇಶ್ ಶೆಟ್ಟಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕೋಮು ಸೌಹಾರ್ದ ಕಾಪಾಡುವ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದರೆ ಎಂದು ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.</p>.<p>ಪೊಲೀಸ್ ಅಧಿಕಾರಿಗಳು ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದ ವಿಷಯದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಒಕ್ಕೂಟವು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದೆ.</p>.<p>ವಿಚಾರಣೆ ನೆಪದಲ್ಲಿ ಹಿಂದೂ ಕಾರ್ಯಕರ್ತರಿಗೆ ಮಧ್ಯರಾತ್ರಿ ದೂರವಾಣಿ ಕರೆ ಮಾಡಿ, ನೋಟಿಸ್ ನೀಡದೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಯಲಾಗುತ್ತಿದೆ ಎಂದು ಒಕ್ಕೂಟ ಹೇಳಿದೆ.</p>.<p>ದಶಕಗಳಿಂದ ಯಾವುದೇ ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗದ ಕೂಲಿ ಕಾರ್ಮಿಕರು, ವಯಸ್ಸಾದವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದೆ.</p>.<p>ಹಿಂದೂ ಜನಜಾಗೃತಿ ಸಮಿತಿ ದಕ್ಷಿಣ ಕರ್ನಾಟಕ ಸಮನ್ವಯಕ ಚಂದ್ರ ಮೋಗವೀರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರಿಗೆ ಬೆದರಿಕೆಯ ಕರೆಗಳು ಬರುತ್ತಿದ್ದು, ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪಿಎಫ್ಐ ಸಂಘಟನೆಯ ಸದಸ್ಯರು ಅನ್ಯ ಸಂಘಟನೆಗಳ ಮೂಲಕ ಸಕ್ರಿಯರಾಗಿದ್ದು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಅವರ ಕೈವಾಡ ಇರುವ ಶಂಕೆ ಇದ್ದು, ಈ ಕುರಿತು ತನಿಖೆ ನಡೆಯಬೇಕು ಎಂದು ಹೇಳಿದರು.</p>.<p>ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆಯೊಡ್ಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದೂ ಅವರು ಒತ್ತಾಯಿಸಿದರು.</p>.<p>ಉಡುಪಿ ಅಭಿರಾಮ ಧಾಮ ಸಂಸ್ಥಾಪಕ ಸುದರ್ಶನ ಭಾರತೀಯ, ಹಿಂದೂ ಮಹಾ ಸಭಾದ ಪ್ರಮೋದ್ ಉಚ್ಚಿಲ, ಶ್ರೀರಾಮ ಸೇನೆ ಮುಖಂಡ ಜಯರಾಂ ಅಂಬೇಕಲ್ಲು, ಗುರುಪ್ರಸಾದ್ ಶೆಣೈ, ರಾಜೇಶ್ ಶೇಟ್, ರಾಘವೇಂದ್ರ ಆಚಾರ್ಯ, ನಾಗರಾಜ್, ಸೀತಾರಾಮ್ ಭಟ್, ಉಮೇಶ್ ಶೆಟ್ಟಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>