<p><strong>ಉಡುಪಿ</strong>: ಮಾನವ ಕಳ್ಳ ಸಾಗಣೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಜಾರಿಗೊಳಿಸಲಾದ ಕಾನೂನುಗಳನ್ನು ಕ್ಷೇತ್ರ ಮಟ್ಟದ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ. ಹೇಳಿದರು. <br><br>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಾನವ ಕಳ್ಳ ಸಾಗಣೆಯಂತಹ ದುಷ್ಕೃತ್ಯಗಳು ನಡೆಯದಂತೆ ನೋಡಿಕೊಳ್ಳುವುದು ಭಾಗೀದಾರ ಇಲಾಖೆಗಳ ಕರ್ತವ್ಯವಾಗಿದೆ. ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಪ್ರತಿಯೊಬ್ಬ ನಾಗರಿಕರು ಬದ್ಧರಾಗಿರಬೇಕು ಎಂದು ತಿಳಿಸಿದರು. <br /><br />ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಇಲಾಖೆಯು ಸಮನ್ವಯತೆಯಿಂದ, ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ದುರ್ಬಲ ಸ್ಥಿತಿಯಲ್ಲಿ ಯಾವುದೇ ಕುಟುಂಬದವರು ವಾಸಿಸುತ್ತಿದ್ದಲ್ಲಿ ಅವರ ಮೇಲೆ ನಿಗಾ ವಹಿಸಬೇಕು ಎಂದರು. <br /><br />ಮಾನವ ಕಳ್ಳ ಸಾಗಣೆ ತಡೆಗಟ್ಟಲು ವ್ಯವಸ್ಥಿತ ಕಾನೂನುಗಳು ಜಾರಿಯಲ್ಲಿದ್ದರೂ ಸಹ ಕಾನೂನುಗಳ ಅರಿವು ಹಾಗೂ ಸಮನ್ವಯದ ಕೊರತೆಯಿಂದಾಗಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಸಾಧ್ಯವಾಗಿರುವುದಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.</p>.<p>ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಮಿತಿಗಳನ್ನು ರಚಿಸಲಾಗಿದ್ದು, ರಕ್ಷಣಾ ಸಮಿತಿಗಳೊಂದಿಗೆ ವಿವಿಧ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅರಿತು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕಿದೆ ಎಂದರು. <br /><br />ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನೆ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ನೇಟಿವ್ ಆರ್ಗನೈಜೇಶನ್ ವ್ಯವಸ್ಥಾಪಕ ಪ್ರೇಮಾನಂದ ಕಲ್ಮಾಡಿ ಅವರು ಉಪನ್ಯಾಸ ನೀಡಿದರು. ದೀಪಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಮಾನವ ಕಳ್ಳ ಸಾಗಣೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಜಾರಿಗೊಳಿಸಲಾದ ಕಾನೂನುಗಳನ್ನು ಕ್ಷೇತ್ರ ಮಟ್ಟದ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ. ಹೇಳಿದರು. <br><br>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಾನವ ಕಳ್ಳ ಸಾಗಣೆಯಂತಹ ದುಷ್ಕೃತ್ಯಗಳು ನಡೆಯದಂತೆ ನೋಡಿಕೊಳ್ಳುವುದು ಭಾಗೀದಾರ ಇಲಾಖೆಗಳ ಕರ್ತವ್ಯವಾಗಿದೆ. ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಪ್ರತಿಯೊಬ್ಬ ನಾಗರಿಕರು ಬದ್ಧರಾಗಿರಬೇಕು ಎಂದು ತಿಳಿಸಿದರು. <br /><br />ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಇಲಾಖೆಯು ಸಮನ್ವಯತೆಯಿಂದ, ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ದುರ್ಬಲ ಸ್ಥಿತಿಯಲ್ಲಿ ಯಾವುದೇ ಕುಟುಂಬದವರು ವಾಸಿಸುತ್ತಿದ್ದಲ್ಲಿ ಅವರ ಮೇಲೆ ನಿಗಾ ವಹಿಸಬೇಕು ಎಂದರು. <br /><br />ಮಾನವ ಕಳ್ಳ ಸಾಗಣೆ ತಡೆಗಟ್ಟಲು ವ್ಯವಸ್ಥಿತ ಕಾನೂನುಗಳು ಜಾರಿಯಲ್ಲಿದ್ದರೂ ಸಹ ಕಾನೂನುಗಳ ಅರಿವು ಹಾಗೂ ಸಮನ್ವಯದ ಕೊರತೆಯಿಂದಾಗಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಸಾಧ್ಯವಾಗಿರುವುದಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.</p>.<p>ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಮಿತಿಗಳನ್ನು ರಚಿಸಲಾಗಿದ್ದು, ರಕ್ಷಣಾ ಸಮಿತಿಗಳೊಂದಿಗೆ ವಿವಿಧ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅರಿತು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕಿದೆ ಎಂದರು. <br /><br />ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನೆ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ನೇಟಿವ್ ಆರ್ಗನೈಜೇಶನ್ ವ್ಯವಸ್ಥಾಪಕ ಪ್ರೇಮಾನಂದ ಕಲ್ಮಾಡಿ ಅವರು ಉಪನ್ಯಾಸ ನೀಡಿದರು. ದೀಪಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>