ಯಕ್ಷಗಾನವನ್ನು ಧಾರ್ಮಿಕ ಭಾವನೆಯಲ್ಲಿ ಬೆಳಕಿನ ಸೇವೆಯಾಗಿ ಪೂಜ್ಯ ಭಾವದಲ್ಲಿ ಗೌರವಿಸಲಾಗುತ್ತದೆ. ಆದರೆ, ಖಾಸಗಿ ವಾಹಿನಿ ಯಕ್ಷಗಾನವನ್ನು ವಿರೂಪಗೊಳಿಸಿ ಪ್ರದರ್ಶಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿರುವ ಹಿನ್ನೆಲೆಯಲ್ಲಿ ವಾಹಿನಿಯ ಮುಖ್ಯಸ್ಥ ರಾಘವೇಂದ್ರ ಹುಣಸೂರು, ನೃತ್ಯ ಸಂಯೋಜಕ ಮಂಜು ಮಾಸ್ಟರ್ ಹಾಗೂ ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.