<p><strong>ಕಾರ್ಕಳ (ಉಡುಪಿ): </strong>ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವು<br />ದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಾವಿರಾರು ಹಿಂದೂ ಕಾರ್ಯಕರ್ತರ ನೋವಿನ ಧ್ವನಿಯಾಗಿ ನಾನು ಸ್ಪರ್ಧಿಸುತ್ತಿದ್ದೇನೆ’ ಎಂದು ಹೇಳಿದ ಅವರು ‘ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋಕಳ್ಳ ತನ ನಡೆಯುತ್ತಿರುವುದು ಕಾರ್ಕಳ ಕ್ಷೇತ್ರದಲ್ಲಿ. ಇಲ್ಲಿನ ಹಿಂದೂ ಕಾರ್ಯಕರ್ತರ ಹೆಸರನ್ನು ಗೂಂಡಾ<br />ಮತ್ತು ರೌಡಿ ಪಟ್ಟಿಯಲ್ಲಿ ಸೇರಿಸ ಲಾಗಿದೆ’ ಎಂದು ದೂರಿದರು.</p>.<p>‘12 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಕಾರ್ಯಕರ್ತರು ಸಲ್ಲಿಸಿರುವ ವರದಿಯ ಆಧಾರದಲ್ಲಿ ಕಾರ್ಕಳವನ್ನು ಸ್ಪರ್ಧೆಗೆ ಅಯ್ಕೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಭ್ರಷ್ಟಾಚಾರ ತುಂಬಿದ್ದು ಅದರ ವಿರುದ್ಧ ಹೋರಾಟ ಹಾಗೂ ಹಿಂದುತ್ವವೇ ನನ್ನ ಧ್ಯೇಯ. ಕಾರ್ಕಳದಲ್ಲಿ ಫೆಬ್ರುವರಿ 5ರಂದು ಕಾರ್ಯಾಲಯ ಉದ್ಘಾಟನೆಯಾಗಲಿದ್ದು ಕಲಬುರಗಿ ಜಿಲ್ಲೆ ಆಂದೋಲದ ಸಿದ್ಧಲಿಂಗ ಶ್ರೀ ಸೇರಿದಂತೆ ಎಂಟಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಿ ಗೋಪೂಜೆ ನೆರವೇರಿಸಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ (ಉಡುಪಿ): </strong>ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವು<br />ದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಾವಿರಾರು ಹಿಂದೂ ಕಾರ್ಯಕರ್ತರ ನೋವಿನ ಧ್ವನಿಯಾಗಿ ನಾನು ಸ್ಪರ್ಧಿಸುತ್ತಿದ್ದೇನೆ’ ಎಂದು ಹೇಳಿದ ಅವರು ‘ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋಕಳ್ಳ ತನ ನಡೆಯುತ್ತಿರುವುದು ಕಾರ್ಕಳ ಕ್ಷೇತ್ರದಲ್ಲಿ. ಇಲ್ಲಿನ ಹಿಂದೂ ಕಾರ್ಯಕರ್ತರ ಹೆಸರನ್ನು ಗೂಂಡಾ<br />ಮತ್ತು ರೌಡಿ ಪಟ್ಟಿಯಲ್ಲಿ ಸೇರಿಸ ಲಾಗಿದೆ’ ಎಂದು ದೂರಿದರು.</p>.<p>‘12 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಕಾರ್ಯಕರ್ತರು ಸಲ್ಲಿಸಿರುವ ವರದಿಯ ಆಧಾರದಲ್ಲಿ ಕಾರ್ಕಳವನ್ನು ಸ್ಪರ್ಧೆಗೆ ಅಯ್ಕೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಭ್ರಷ್ಟಾಚಾರ ತುಂಬಿದ್ದು ಅದರ ವಿರುದ್ಧ ಹೋರಾಟ ಹಾಗೂ ಹಿಂದುತ್ವವೇ ನನ್ನ ಧ್ಯೇಯ. ಕಾರ್ಕಳದಲ್ಲಿ ಫೆಬ್ರುವರಿ 5ರಂದು ಕಾರ್ಯಾಲಯ ಉದ್ಘಾಟನೆಯಾಗಲಿದ್ದು ಕಲಬುರಗಿ ಜಿಲ್ಲೆ ಆಂದೋಲದ ಸಿದ್ಧಲಿಂಗ ಶ್ರೀ ಸೇರಿದಂತೆ ಎಂಟಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಿ ಗೋಪೂಜೆ ನೆರವೇರಿಸಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>