ಶುಕ್ರವಾರ, ಮಾರ್ಚ್ 24, 2023
31 °C

ಕಾರ್ಕಳದಿಂದ ಪ‍ಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಮುತಾಲಿಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಕಳ (ಉಡುಪಿ): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವು
ದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಾವಿರಾರು ಹಿಂದೂ ಕಾರ್ಯಕರ್ತರ ನೋವಿನ ಧ್ವನಿಯಾಗಿ ನಾನು ಸ್ಪರ್ಧಿಸುತ್ತಿದ್ದೇನೆ’ ಎಂದು ಹೇಳಿದ ಅವರು ‘ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋಕಳ್ಳ ತನ ನಡೆಯುತ್ತಿರುವುದು ಕಾರ್ಕಳ ಕ್ಷೇತ್ರದಲ್ಲಿ. ಇಲ್ಲಿನ ಹಿಂದೂ ಕಾರ್ಯಕರ್ತರ ಹೆಸರನ್ನು ಗೂಂಡಾ
ಮತ್ತು ರೌಡಿ ಪಟ್ಟಿಯಲ್ಲಿ ಸೇರಿಸ ಲಾಗಿದೆ’ ಎಂದು ದೂರಿದರು.

‘12 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಕಾರ್ಯಕರ್ತರು ಸಲ್ಲಿಸಿರುವ ವರದಿಯ ಆಧಾರದಲ್ಲಿ ಕಾರ್ಕಳವನ್ನು ಸ್ಪರ್ಧೆಗೆ ಅಯ್ಕೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಭ್ರಷ್ಟಾಚಾರ ತುಂಬಿದ್ದು ಅದರ ವಿರುದ್ಧ ಹೋರಾಟ ಹಾಗೂ ಹಿಂದುತ್ವವೇ ನನ್ನ ಧ್ಯೇಯ. ಕಾರ್ಕಳದಲ್ಲಿ ಫೆಬ್ರುವರಿ 5ರಂದು ಕಾರ್ಯಾಲಯ ಉದ್ಘಾಟನೆಯಾಗಲಿದ್ದು ಕಲಬುರಗಿ ಜಿಲ್ಲೆ ಆಂದೋಲದ ಸಿದ್ಧಲಿಂಗ ಶ್ರೀ ಸೇರಿದಂತೆ ಎಂಟಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಿ ಗೋಪೂಜೆ ನೆರವೇರಿಸಲಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು