ಜಿಲ್ಲೆಯಲ್ಲಿ ಶೀತ, ಕೆಮ್ಮು, ನಗಡಿ, ಜ್ವರದಿಂದ ಬಳಲುತ್ತಿರುವ ರೋಗಿಗಳ ವಿವರ ನೀಡದ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ಗಳ ಲೈಸೆನ್ಸ್ ರದ್ದುಮಾಡಲಾಗುವುದು. ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು ಪ್ರತಿದಿನ ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿನೀಡಿ, ಶೀತ, ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವ ರೋಗಿಗಳ ವರದಿ ನೀಡಬೇಕು. ನಿರ್ಲಕ್ಷ್ಯದಿಂದ ಸೋಂಕಿತ ವ್ಯಕ್ತಿ ಮರಣ ಹೊಂದಿದರೆ ಸಿಬ್ಬಂದಿ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.