<p><strong>ಉಡುಪಿ</strong>: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ಗೆ ಪರಶುರಾಮನ ಹೆಸರಿಟ್ಟರೆ ಕಾಂಗ್ರೆಸ್ನವರಿಗೇಕೆ ಹೊಟ್ಟೆ ಉರಿ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನಿಸಿದ್ದಾರೆ.</p>.<p>ಪರಶುರಾಮ ಥೀಂ ಪಾರ್ಕ್ ವಿಚಾರವಾಗಿ ಕಾಂಗ್ರೆಸ್ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಥೀಂ ಪಾರ್ಕ್ಗೆ ಪರಶುರಾಮನ ಬದಲು ಶಾಸಕ ಸುನೀಲ್ ಕುಮಾರ್ ಅವರ ಹೆಸರಿಟ್ಟಿದ್ದರೆ, ಕಾಂಗ್ರೆಸ್ನವರು ಪ್ರತಿಭಟನೆ ನಡೆಸುವುದಕ್ಕೆ ಅರ್ಥವಿತ್ತು ಎಂದೂ ಹೇಳಿದ್ದಾರೆ.</p>.<p>ಕಾಂಗ್ರೆಸ್ನವರು ದೇಶದ ರಾಮನನ್ನು, ಹಿಂದುತ್ವವನ್ನು ಒಪ್ಪಿಕೊಳ್ಳುವುದಿಲ್ಲ ಎಂಬುದು ಇದರಿಂದ ಸಾಬೀತಾಗುತ್ತದೆ ಎಂದರು.</p>.<p>ಒಂದೂ ಕಾಲು ವರ್ಷದಿಂದ ಸುಮ್ಮನಿದ್ದ ಕಾಂಗ್ರೆಸ್ ಸರ್ಕಾರ ಈಗ ಥೀಂ ಪಾರ್ಕ್ ವಿಚಾರಕ್ಕೆ ಸಂಬಂಧಿಸಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಅಮಾನತು ಮಾಡಿದೆ ಎಂದರು.</p>.<p>ಕಾರ್ಕಳದ ಕಾಂಗ್ರೆಸ್ ಮುಖಂಡ ಉದಯಕುಮಾರ್ ಮುನಿಯಾಲು ಅವರು ಬೆಂಗಳೂರಿನಲ್ಲಿ ಮೂರ್ತಿ ಜಪ್ತಿ ಮಾಡುವಾಗ ಉಪಸ್ಥಿತರಿದ್ದರು. ಅವರನ್ನು ಪೊಲೀಸ್ ಇಲಾಖೆಗೆ ನೇಮಕ ಮಾಡಿದರೂ ಆಶ್ಚರ್ಯವಿಲ್ಲ ಎಂದರು.</p>.<p>ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯ್ಕ್ ಮಾತನಾಡಿ, ಕಾರ್ಕಳದಲ್ಲಿ ದಿನನಿತ್ಯ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳುಮೊಕದ್ದಮೆ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಪ್ರತಿಭಟನೆಯ ಬಳಿಕ ಬಿಜೆಪಿ ನಿಯೋಗ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರಿಗೆ ಪರಶುರಾಮ ಥೀಂ ಪಾರ್ಕ್ ವಿವಾದದ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ಗೆ ಪರಶುರಾಮನ ಹೆಸರಿಟ್ಟರೆ ಕಾಂಗ್ರೆಸ್ನವರಿಗೇಕೆ ಹೊಟ್ಟೆ ಉರಿ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನಿಸಿದ್ದಾರೆ.</p>.<p>ಪರಶುರಾಮ ಥೀಂ ಪಾರ್ಕ್ ವಿಚಾರವಾಗಿ ಕಾಂಗ್ರೆಸ್ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಥೀಂ ಪಾರ್ಕ್ಗೆ ಪರಶುರಾಮನ ಬದಲು ಶಾಸಕ ಸುನೀಲ್ ಕುಮಾರ್ ಅವರ ಹೆಸರಿಟ್ಟಿದ್ದರೆ, ಕಾಂಗ್ರೆಸ್ನವರು ಪ್ರತಿಭಟನೆ ನಡೆಸುವುದಕ್ಕೆ ಅರ್ಥವಿತ್ತು ಎಂದೂ ಹೇಳಿದ್ದಾರೆ.</p>.<p>ಕಾಂಗ್ರೆಸ್ನವರು ದೇಶದ ರಾಮನನ್ನು, ಹಿಂದುತ್ವವನ್ನು ಒಪ್ಪಿಕೊಳ್ಳುವುದಿಲ್ಲ ಎಂಬುದು ಇದರಿಂದ ಸಾಬೀತಾಗುತ್ತದೆ ಎಂದರು.</p>.<p>ಒಂದೂ ಕಾಲು ವರ್ಷದಿಂದ ಸುಮ್ಮನಿದ್ದ ಕಾಂಗ್ರೆಸ್ ಸರ್ಕಾರ ಈಗ ಥೀಂ ಪಾರ್ಕ್ ವಿಚಾರಕ್ಕೆ ಸಂಬಂಧಿಸಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಅಮಾನತು ಮಾಡಿದೆ ಎಂದರು.</p>.<p>ಕಾರ್ಕಳದ ಕಾಂಗ್ರೆಸ್ ಮುಖಂಡ ಉದಯಕುಮಾರ್ ಮುನಿಯಾಲು ಅವರು ಬೆಂಗಳೂರಿನಲ್ಲಿ ಮೂರ್ತಿ ಜಪ್ತಿ ಮಾಡುವಾಗ ಉಪಸ್ಥಿತರಿದ್ದರು. ಅವರನ್ನು ಪೊಲೀಸ್ ಇಲಾಖೆಗೆ ನೇಮಕ ಮಾಡಿದರೂ ಆಶ್ಚರ್ಯವಿಲ್ಲ ಎಂದರು.</p>.<p>ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯ್ಕ್ ಮಾತನಾಡಿ, ಕಾರ್ಕಳದಲ್ಲಿ ದಿನನಿತ್ಯ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳುಮೊಕದ್ದಮೆ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಪ್ರತಿಭಟನೆಯ ಬಳಿಕ ಬಿಜೆಪಿ ನಿಯೋಗ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರಿಗೆ ಪರಶುರಾಮ ಥೀಂ ಪಾರ್ಕ್ ವಿವಾದದ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>