<p><strong>ಉಡುಪಿ</strong>: ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಒಟ್ಟು 29 ಪೊಲೀಸ್ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.</p>.<p>ಈ ಚೆಕ್ ಪೋಸ್ಟ್ಗಳಲ್ಲಿ ಹಗಲು ಹಾಗೂ ರಾತ್ರಿ ಪಾಳಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡುತ್ತಿದ್ದು, ಅಲ್ಲಿನ ಸಿಬ್ಬಂದಿಯು ಮರಳು ಸಾಗಾಟ ಹಾಗೂ ಕೆಂಪು ಕಲ್ಲು, ಶಿಲೆಕಲ್ಲು ಹಾಗೂ ಎಂ ಸ್ಯಾಂಡ್ ಸಾಗಾಟ ಮಾಡುವ ಎಲ್ಲಾ ವಾಹನಗಳನ್ನು ಪರಿಶೀಲನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಡಿ. 6ರಿಂದ ಸುಮಾರು 3,966 ವಾಹನಗಳನ್ನ ಪರಿಶೀಲನೆ ಮಾಡಲಾಗಿದೆ. 11 ವಾಹನಗಳಲ್ಲಿ ಸರ್ಕಾರಕ್ಕೆ ಯಾವುದೇ ರಾಯಧನವನ್ನು ಭರಿಸದೇ, ಯಾವುದೇ ಪರವಾನಗಿ ಇಲ್ಲದೇ ಸಾಗಾಟ ಮಾಡಿರುವುದು ಕಂಡು ಬಂದಿದೆ. ಈ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.</p>.<p>ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟ ವಾಹನವನ್ನು ಜಪ್ತಿಮಾಡಿ, ವಾಹನದ ಚಾಲಕ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಳಿದ 10 ವಾಹನಗಳನ್ನು ಮಹಜರು ಮುಖೇನ ಸ್ವಾಧೀನಪಡಿಸಿಕೊಂಡು, ಉಡುಪಿ ಗಣಿ ಇಲಾಖೆಗೆ ಮುಂದಿನ ಕ್ರಮಕ್ಕಾಗಿ ವರದಿ ಸಲ್ಲಿಸಲಾಗಿದೆ. ಗಣಿ ಇಲಾಖೆಯವರು ಆ ವಾಹನಗಳ ಆರ್.ಸಿ. ಮಾಲೀಕರಿಗೆ ಒಟ್ಟು ₹3.08 ಲಕ್ಷ ದಂಡ ವಿಧಿಸಿದ್ದಾರೆ ಎಂದೂ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಒಟ್ಟು 29 ಪೊಲೀಸ್ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.</p>.<p>ಈ ಚೆಕ್ ಪೋಸ್ಟ್ಗಳಲ್ಲಿ ಹಗಲು ಹಾಗೂ ರಾತ್ರಿ ಪಾಳಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡುತ್ತಿದ್ದು, ಅಲ್ಲಿನ ಸಿಬ್ಬಂದಿಯು ಮರಳು ಸಾಗಾಟ ಹಾಗೂ ಕೆಂಪು ಕಲ್ಲು, ಶಿಲೆಕಲ್ಲು ಹಾಗೂ ಎಂ ಸ್ಯಾಂಡ್ ಸಾಗಾಟ ಮಾಡುವ ಎಲ್ಲಾ ವಾಹನಗಳನ್ನು ಪರಿಶೀಲನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಡಿ. 6ರಿಂದ ಸುಮಾರು 3,966 ವಾಹನಗಳನ್ನ ಪರಿಶೀಲನೆ ಮಾಡಲಾಗಿದೆ. 11 ವಾಹನಗಳಲ್ಲಿ ಸರ್ಕಾರಕ್ಕೆ ಯಾವುದೇ ರಾಯಧನವನ್ನು ಭರಿಸದೇ, ಯಾವುದೇ ಪರವಾನಗಿ ಇಲ್ಲದೇ ಸಾಗಾಟ ಮಾಡಿರುವುದು ಕಂಡು ಬಂದಿದೆ. ಈ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.</p>.<p>ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟ ವಾಹನವನ್ನು ಜಪ್ತಿಮಾಡಿ, ವಾಹನದ ಚಾಲಕ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಳಿದ 10 ವಾಹನಗಳನ್ನು ಮಹಜರು ಮುಖೇನ ಸ್ವಾಧೀನಪಡಿಸಿಕೊಂಡು, ಉಡುಪಿ ಗಣಿ ಇಲಾಖೆಗೆ ಮುಂದಿನ ಕ್ರಮಕ್ಕಾಗಿ ವರದಿ ಸಲ್ಲಿಸಲಾಗಿದೆ. ಗಣಿ ಇಲಾಖೆಯವರು ಆ ವಾಹನಗಳ ಆರ್.ಸಿ. ಮಾಲೀಕರಿಗೆ ಒಟ್ಟು ₹3.08 ಲಕ್ಷ ದಂಡ ವಿಧಿಸಿದ್ದಾರೆ ಎಂದೂ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>