ಸಾಮಾಜಿಕ ಹೋರಾಟಗಾರ ಪ್ರಕಾಶ್ ಮಲ್ಪೆ ಮಾತನಾಡಿ, ನದಿ ವ್ಯಾಪ್ತಿಯ 5ಕ್ಕೂ ಹೆಚ್ಚು ಕಡೆಗಳಲ್ಲಿ ಅಕ್ರಮವಾಗಿ ಧಕ್ಕೆಗಳನ್ನು ನಿರ್ಮಾಣ ಮಾಡಿ ಮರಳು ತೆಗೆದು ಸಾಗಿಸಲಾಗುತ್ತಿದೆ. ಇದರಿಂದ ಶಬ್ದಮಾಲಿನ್ಯ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಗ್ರಾಮಸ್ಥರು ಪ್ರತಿದಿನ ನಿದ್ರೆಯಿಲ್ಲದೆ ರಾತ್ರಿಗಳನ್ನು ಕಳೆಯಬೇಕಾಗಿದೆ. ಹಸಿರಿನಿಂದ ಕಂಗೊಳಿಸುತ್ತಿದ್ದ ಊರು ಧೂಳಿನಿಂದ ಮುಚ್ಚಿಹೋಗಿದೆ. ಮರಳಿನ ಗಣಿಗಾರಿಕೆ ಮುಂದುವರಿದರೆ ನದಿಯ ಮೇಲೆ ನಿರ್ಮಿಸಿರುವ ರೈಲ್ವೇ ಬ್ರಿಡ್ಜ್ ಕುಸಿದು ಬೀಳುವ ಅಪಾಯ ಇದೆ ಎಂದರು.