<p><strong>ಕಾಪು</strong> (ಪಡುಬಿದ್ರಿ): ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪುರಸಭೆ ವ್ಯಾಪ್ತಿಯ ಕೊಪ್ಪಲಂಗಡಿಯಲ್ಲಿ ಸೋಮವಾರ ಬೆಳಗ್ಗೆ ಕಸ ಎಸೆದು ಹೋಗುತ್ತಿದ್ದ ಆಂಧ್ರಪ್ರದೇಶ ಮೂಲದ ಲಾರಿಯನ್ನು ಬೆನ್ನಟ್ಟಿ ಕಸ ಎಸೆದ ಚಾಲಕನಿಂದಲೇ ಕಸ ತೆರವುಗೊಳಿಸಿ ದಂಡ ವಿಧಿಸಲಾಗಿದೆ.</p>.<p>ಆಂಧ್ರಪ್ರದೇಶದಿಂದ ಉಡುಪಿ ಕಡೆ ತೆರಳುತ್ತಿದ್ದ ಲಾರಿಯಲ್ಲಿದ್ದ ಕಸವನ್ನು ಚಾಲಕ ಮತ್ತು ನಿರ್ವಾಹಕ ರಸ್ತೆ ಬದಿಗೆ ಎಸೆಯುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ವಿಡಿಯೊ ಮಾಡಿ ಕಸ ಅಲ್ಲಿ ಹಾಕದಂತೆ ಸೂಚಿಸಿದ್ದರು. ಇದನ್ನು ನಿರ್ಲಕ್ಷಿಸಿದ ಚಾಲಕ ಎಲ್ಲಾ ಕಸವನ್ನು ಅಲ್ಲೇ ಎಸೆದು ತೆರಳಿದ್ದರು. ಸ್ಥಳೀಯರು ಈ ಬಗ್ಗೆ ಪುರಸಭೆಗೆ ಮಾಹಿತಿ ನೀಡಿದ್ದರು.</p>.<p>ಪುರಸಭೆ ಸದಸ್ಯ ಅನಿಲ್ ಕುಮಾರ್ ಮಾಹಿತಿ ಪಡೆದು ಲಾರಿಯನ್ನು ಬೆನ್ನಟ್ಟಿ ಕಟಪಾಡಿ ಪೊಲೀಸರ ಸಹಕಾರದೊಂದಿಗೆ ಜಂಕ್ಷನ್ ಬಳಿ ಲಾರಿಯನ್ನು ತಡೆಯಲು ಯಶಸ್ವಿಯಾದರು. ಚಾಲಕ ತಪ್ಪೊಪ್ಪಿಕೊಂಡಿದ್ದಾನೆ. ಪುರಸಭೆಯವರು ಲಾರಿ ಮೂಲಕ ಚಾಲಕನನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಕಸ ತೆರವುಗೊಳಿಸಿದ್ದಾರೆ. ₹2 ಸಾವಿರ ದಂಡ ವಿಧಿಸಿ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಪು</strong> (ಪಡುಬಿದ್ರಿ): ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪುರಸಭೆ ವ್ಯಾಪ್ತಿಯ ಕೊಪ್ಪಲಂಗಡಿಯಲ್ಲಿ ಸೋಮವಾರ ಬೆಳಗ್ಗೆ ಕಸ ಎಸೆದು ಹೋಗುತ್ತಿದ್ದ ಆಂಧ್ರಪ್ರದೇಶ ಮೂಲದ ಲಾರಿಯನ್ನು ಬೆನ್ನಟ್ಟಿ ಕಸ ಎಸೆದ ಚಾಲಕನಿಂದಲೇ ಕಸ ತೆರವುಗೊಳಿಸಿ ದಂಡ ವಿಧಿಸಲಾಗಿದೆ.</p>.<p>ಆಂಧ್ರಪ್ರದೇಶದಿಂದ ಉಡುಪಿ ಕಡೆ ತೆರಳುತ್ತಿದ್ದ ಲಾರಿಯಲ್ಲಿದ್ದ ಕಸವನ್ನು ಚಾಲಕ ಮತ್ತು ನಿರ್ವಾಹಕ ರಸ್ತೆ ಬದಿಗೆ ಎಸೆಯುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ವಿಡಿಯೊ ಮಾಡಿ ಕಸ ಅಲ್ಲಿ ಹಾಕದಂತೆ ಸೂಚಿಸಿದ್ದರು. ಇದನ್ನು ನಿರ್ಲಕ್ಷಿಸಿದ ಚಾಲಕ ಎಲ್ಲಾ ಕಸವನ್ನು ಅಲ್ಲೇ ಎಸೆದು ತೆರಳಿದ್ದರು. ಸ್ಥಳೀಯರು ಈ ಬಗ್ಗೆ ಪುರಸಭೆಗೆ ಮಾಹಿತಿ ನೀಡಿದ್ದರು.</p>.<p>ಪುರಸಭೆ ಸದಸ್ಯ ಅನಿಲ್ ಕುಮಾರ್ ಮಾಹಿತಿ ಪಡೆದು ಲಾರಿಯನ್ನು ಬೆನ್ನಟ್ಟಿ ಕಟಪಾಡಿ ಪೊಲೀಸರ ಸಹಕಾರದೊಂದಿಗೆ ಜಂಕ್ಷನ್ ಬಳಿ ಲಾರಿಯನ್ನು ತಡೆಯಲು ಯಶಸ್ವಿಯಾದರು. ಚಾಲಕ ತಪ್ಪೊಪ್ಪಿಕೊಂಡಿದ್ದಾನೆ. ಪುರಸಭೆಯವರು ಲಾರಿ ಮೂಲಕ ಚಾಲಕನನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಕಸ ತೆರವುಗೊಳಿಸಿದ್ದಾರೆ. ₹2 ಸಾವಿರ ದಂಡ ವಿಧಿಸಿ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>