<p><strong>ಉಡುಪಿ:</strong> ಭಾರತೀಯ ಕಲೆಗಳು ಬಹು ಶ್ರೇಷ್ಠವಾಗಿವೆ. ಅವುಗಳಲ್ಲೂ ಉಪಯೋಗಿ ಕಲೆಗಳು ದಿನನಿತ್ಯದ ಬದುಕಿನಲ್ಲಿ ಹಾಸುಹೊಕ್ಕಾಗಿ ನಮ್ಮ ಸೌಂದರ್ಯ ಪ್ರಜ್ಞೆಯನ್ನು ಬಿಂಬಿಸುವಂಥವು ಎಂದು ಮಣಿಪಾಲ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಆ್ಯಂಡ್ ಪ್ಲಾನಿಂಗ್ನ ಸಹ ಪ್ರಾಧ್ಯಾಪಕ ತ್ರಿವಿಕ್ರಮ್ ಭಟ್ ಅಭಿಪ್ರಾಯಪಟ್ಟರು.</p>.<p>ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೊ ವತಿಯಿಂದ ಮಣಿಪಾಲ ವಿಶ್ವವಿದ್ಯಾಲಯ, ಹಟ್ಟಿಯಂಗಡಿಯ ಸಿದ್ಧಿವಿನಾಯಕ ರಿಸಿಡೆನ್ಸಿಯಲ್ ಸ್ಕೂಲ್ ಸಹಯೋಗದಲ್ಲಿ ಬಡಗುಪೇಟೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚನ್ನಪಟ್ಟಣದ ಗೊಂಬೆ ತಯಾರಿಕೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಚನ್ನಪಟ್ಟಣದಂತಹ ವಿಶೇಷ ಕಲೆ ಪ್ಲಾಸ್ಟಿಕ್ ಆಟಿಕೆಗಳಿಗೆ ಇಂದು ಸಡ್ಡು ಹೊಡೆದು ನಿಂತಿರುವುದು ಮತ್ತು ಕಾರ್ಯಾಗಾರವು ಉಡುಪಿಯಲ್ಲಿ ಆಯೋಜನೆಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಸುಕನ್ಯಾ ನೀಲಸಂದ್ರ, ಸುಂದ್ರಕಲಾ ಅವರು ಆಟಿಕೆಗಳ ಉಪಯುಕ್ತತೆ, ತಾಂತ್ರಿಕತೆಯನ್ನು ವಿವರಿಸಿದರು.</p>.<p>ಟಿಪ್ಪು ಸುಲ್ತಾನ್ ಕಾಲದಲ್ಲಿ ಪರ್ಶಿಯನ್ ಆಟಿಕೆಗಳ ಪ್ರಭಾವದಿಂದ ಚನ್ನಪಟ್ಟಣದಲ್ಲಿ ಬೆಳೆದು ಬಂದಿರುವ ಈ ಕಲೆ ಇಂದಿಗೆ ವಿಶ್ವದಾದ್ಯಂತ ಬಹು ಮನ್ನಣೆ ಗಳಿಸುತ್ತಿದೆ. ಹಗುರವಾದ ಮರದಿಂದ ನೈಸರ್ಗಿಕ ವರ್ಣದಲ್ಲಿ ತಯಾರಿಸಲಾಗುವ ಆಟಿಕೆಗಳು ಬಹು ಉಪಯುಕ್ತವಾಗಿವೆ ಎಂದು ಹೇಳಿದರು.</p>.<p>ಕಾರ್ಯಾಗಾರದ ಸಂಯೋಜಕ ಜನಾರ್ದನ ಹಾವಂಜೆ ಮಾತನಾಡಿ, ಕರಾವಳಿಯ ಕಲಾಸಕ್ತರು ದೇಶೀಯ ಕಲೆಗಳ ಬಗ್ಗೆ ಅರಿವು ಹೊಂದಿ, ಅದರ ಹಿಂದಿನ ಇತಿಹಾಸ, ಶ್ರಮ, ತಾಂತ್ರಿಕತೆಯನ್ನು ತಿಳಿದುಕೊಳ್ಳಬೇಕೆಂಬುದು ಕಾರ್ಯಾಗಾರದ ಉದ್ದೇಶ ಎಂದರು.</p>.<p>ಫೌಂಡೇಷನ್ ಅಧ್ಯಕ್ಷ, ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಭಾರತೀಯ ಕಲೆಗಳು ಬಹು ಶ್ರೇಷ್ಠವಾಗಿವೆ. ಅವುಗಳಲ್ಲೂ ಉಪಯೋಗಿ ಕಲೆಗಳು ದಿನನಿತ್ಯದ ಬದುಕಿನಲ್ಲಿ ಹಾಸುಹೊಕ್ಕಾಗಿ ನಮ್ಮ ಸೌಂದರ್ಯ ಪ್ರಜ್ಞೆಯನ್ನು ಬಿಂಬಿಸುವಂಥವು ಎಂದು ಮಣಿಪಾಲ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಆ್ಯಂಡ್ ಪ್ಲಾನಿಂಗ್ನ ಸಹ ಪ್ರಾಧ್ಯಾಪಕ ತ್ರಿವಿಕ್ರಮ್ ಭಟ್ ಅಭಿಪ್ರಾಯಪಟ್ಟರು.</p>.<p>ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೊ ವತಿಯಿಂದ ಮಣಿಪಾಲ ವಿಶ್ವವಿದ್ಯಾಲಯ, ಹಟ್ಟಿಯಂಗಡಿಯ ಸಿದ್ಧಿವಿನಾಯಕ ರಿಸಿಡೆನ್ಸಿಯಲ್ ಸ್ಕೂಲ್ ಸಹಯೋಗದಲ್ಲಿ ಬಡಗುಪೇಟೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚನ್ನಪಟ್ಟಣದ ಗೊಂಬೆ ತಯಾರಿಕೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಚನ್ನಪಟ್ಟಣದಂತಹ ವಿಶೇಷ ಕಲೆ ಪ್ಲಾಸ್ಟಿಕ್ ಆಟಿಕೆಗಳಿಗೆ ಇಂದು ಸಡ್ಡು ಹೊಡೆದು ನಿಂತಿರುವುದು ಮತ್ತು ಕಾರ್ಯಾಗಾರವು ಉಡುಪಿಯಲ್ಲಿ ಆಯೋಜನೆಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಸುಕನ್ಯಾ ನೀಲಸಂದ್ರ, ಸುಂದ್ರಕಲಾ ಅವರು ಆಟಿಕೆಗಳ ಉಪಯುಕ್ತತೆ, ತಾಂತ್ರಿಕತೆಯನ್ನು ವಿವರಿಸಿದರು.</p>.<p>ಟಿಪ್ಪು ಸುಲ್ತಾನ್ ಕಾಲದಲ್ಲಿ ಪರ್ಶಿಯನ್ ಆಟಿಕೆಗಳ ಪ್ರಭಾವದಿಂದ ಚನ್ನಪಟ್ಟಣದಲ್ಲಿ ಬೆಳೆದು ಬಂದಿರುವ ಈ ಕಲೆ ಇಂದಿಗೆ ವಿಶ್ವದಾದ್ಯಂತ ಬಹು ಮನ್ನಣೆ ಗಳಿಸುತ್ತಿದೆ. ಹಗುರವಾದ ಮರದಿಂದ ನೈಸರ್ಗಿಕ ವರ್ಣದಲ್ಲಿ ತಯಾರಿಸಲಾಗುವ ಆಟಿಕೆಗಳು ಬಹು ಉಪಯುಕ್ತವಾಗಿವೆ ಎಂದು ಹೇಳಿದರು.</p>.<p>ಕಾರ್ಯಾಗಾರದ ಸಂಯೋಜಕ ಜನಾರ್ದನ ಹಾವಂಜೆ ಮಾತನಾಡಿ, ಕರಾವಳಿಯ ಕಲಾಸಕ್ತರು ದೇಶೀಯ ಕಲೆಗಳ ಬಗ್ಗೆ ಅರಿವು ಹೊಂದಿ, ಅದರ ಹಿಂದಿನ ಇತಿಹಾಸ, ಶ್ರಮ, ತಾಂತ್ರಿಕತೆಯನ್ನು ತಿಳಿದುಕೊಳ್ಳಬೇಕೆಂಬುದು ಕಾರ್ಯಾಗಾರದ ಉದ್ದೇಶ ಎಂದರು.</p>.<p>ಫೌಂಡೇಷನ್ ಅಧ್ಯಕ್ಷ, ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>