ಮೀನುಗಾರರ ಹರ್ಷ: ಕರಾವಳಿ ಭಾಗದ ಜೀವನಾಡಿಯಾಗಿರುವ ಪಂಚಗಂಗಾವಳಿ ನೆನಪು ಶಾಶ್ವತವಾಗಿಸುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಮಂಡಳಿ ಪಂಚಗಂಗಾ ಎಕ್ಸ್ಪ್ರೆಸ್ ಎಂದು ಹೆಸರು ಬದಲಾಯಿಸಿರುವುದಕ್ಕೆ ಮೊಗವೀರ ಹಾಗೂ ಖಾರ್ವಿ ಸಮಾಜದ ಬಂಧುಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಬೇಡಿಕೆಗೆ ಸ್ಪಂದಿಸಿರುವ ಶಾಸಕ, ಸಂಸದ ಹಾಗೂ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.