<p><strong>ಉಡುಪಿ:</strong> ಸಾರ್ವಜನಿಕವಾಗಿ ಸಾಮೂಹಿಕ ಗಣೇಶ ಚತುರ್ಥಿ ಆಚರಣೆ ಮಾಡಲು ಅವಕಾಶವಿಲ್ಲ. ಮನೆಯಲ್ಲಿ ಹಬ್ಬ ಆಚರಿಸಲು ಅಡ್ಡಿ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಗಣಪತಿ ದೇವಸ್ಥಾನಗಳಲ್ಲಿ ಪೂಜೆ ಮಾಡಲು ಅವಕಾಶವಿದೆ. ಆದರೆ, ಉತ್ಸವ, ಮೆರವಣಿಗೆ, ಕಾರ್ಯಕ್ರಮ ಆಯೋಜಿಸಲು ಅವಕಾಶವಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಸಾರ್ವಜನಿಕರು ಆದೇಶ ಪಾಲಿಸಬೇಕು ಎಂದರು.</p>.<p>ಮನೆಯಲ್ಲಿ ಗಣೇಶನನ್ನು ಕೂರಿಸಿ, ಬಾವಿಗಳಲ್ಲಿ ವಿಸರ್ಜನೆ ಮಾಡಬಹುದು. ಆದರೆ, ಜಿಲ್ಲಾಡಳಿತದಿಂದ ವಿಸರ್ಜನೆಗೆ ವ್ಯವಸ್ಥೆ ಮಾಡುವುದಿಲ್ಲ ಎಂದರು.</p>.<p>ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ ಎಂಬ ಆತಂಕ ಸಾರ್ವಜನಿಕರಲ್ಲಿದೆ. ಸೋಂಕು ನಿಯಂತ್ರಣ ಕೈಮೀರಿಲ್ಲ. ಬದಲಾಗಿ, ಪರೀಕ್ಷೆ ಪ್ರಮಾಣ ಹೆಚ್ಚಾಗಿರುವುದರಿಂದ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ ಎಂದು ತಿಳಿಸಿದರು.</p>.<p>ಆರಂಭದಲ್ಲಿ ಪ್ರತಿದಿನ 500 ಪರೀಕ್ಷೆ ಮಾಡಿದಾಗ 100 ಜನರಿಗೆ ಸೋಂಕು ಪತ್ತೆಯಾಗುತ್ತಿತ್ತು. ಈಗ 2,500ಕ್ಕೆ ಹೆಚ್ಚಿಸಿರುವುದರಿಂದ ಪ್ರಮಾಣ ಹೆಚ್ಚಾಗಿದೆ. ಸೋಂಕಿನ ಸರಪಳಿ ತುಂಡರಿಸಲು ಪರೀಕ್ಷಾ ಪ್ರಮಾಣ ಹೆಚ್ಚಿಸಲಾಗಿದೆ ಎಂದರು.</p>.<p>ಕಳೆದ ತಿಂಗಳು ಶೇ 25ರಷ್ಟಿದ್ದ ಪಾಸಿಟಿವ್ ಪ್ರಮಾಣ, ಸದ್ಯ ಶೇ 10ಕ್ಕಿಳಿದಿದೆ. ತಿಂಗಳಾಂತ್ಯಕ್ಕೆ ಸೋಂಕಿನ ಪ್ರಮಾಣವನ್ನು ಶೇ 5ಕ್ಕೆ ತಗ್ಗಿಸುವ ಗುರಿ ಇದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.</p>.<p>ಕಳೆದ ತಿಂಗಳು ಶೇ 50ಕ್ಕಿಂತ ಹೆಚ್ಚು ಸೋಂಕಿರತರಲ್ಲಿ ರೋಗದ ಗುಣಲಕ್ಷಣ ಕಂಡುಬರುತ್ತಿತ್ತು. ಈಗ ಪ್ರಮಾಣ ಶೇ 10ಕ್ಕಿಳಿದಿದೆ. ಐಸಿಯು ಬೆಡ್ಗಳು, ಆಕ್ಸಿಜನ್ ಬೆಡ್ಗಳು ಅಗತ್ಯ ಪ್ರಮಾಣದಲ್ಲಿದ್ದು, ಸಾರ್ವಜನಿಕರು ಭಯ ಪಡಬೇಕಿಲ್ಲ ಎಂದರು.</p>.<p>ಸರ್ಕಾರದ ಮಾರ್ಗಸೂಚಿ ಪ್ರಕಾರ ಕೆಲಸ ನಿರ್ವಹಿಸುವ ಜಾಗ, ಕಚೇರಿ, ಕಾರ್ಖಾನೆಗಳನ್ನು ಸೀಲ್ಡೌನ್ ಮಾಡುವಂತಿಲ್ಲ. ಸೋಂಕು ಪತ್ತೆ ಜಾಗವನ್ನು ಸ್ಯಾನಿಟೈಸ್ ಮಾಡುವುದು ಹಾಗೂ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಕಡ್ಡಾಯವಾಗಿ ಕ್ವಾರಂಟೈನ್ಗೊಳಪಡಿಸಿ ಪರೀಕ್ಷೆಗೊಳಪಡಿಸಾಗುತ್ತಿದೆ. ಜಿಲ್ಲಾಡಳಿತ ತಾರತಮ್ಯ ನೀತಿ ಅನುಸರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸಾರ್ವಜನಿಕವಾಗಿ ಸಾಮೂಹಿಕ ಗಣೇಶ ಚತುರ್ಥಿ ಆಚರಣೆ ಮಾಡಲು ಅವಕಾಶವಿಲ್ಲ. ಮನೆಯಲ್ಲಿ ಹಬ್ಬ ಆಚರಿಸಲು ಅಡ್ಡಿ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಗಣಪತಿ ದೇವಸ್ಥಾನಗಳಲ್ಲಿ ಪೂಜೆ ಮಾಡಲು ಅವಕಾಶವಿದೆ. ಆದರೆ, ಉತ್ಸವ, ಮೆರವಣಿಗೆ, ಕಾರ್ಯಕ್ರಮ ಆಯೋಜಿಸಲು ಅವಕಾಶವಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಸಾರ್ವಜನಿಕರು ಆದೇಶ ಪಾಲಿಸಬೇಕು ಎಂದರು.</p>.<p>ಮನೆಯಲ್ಲಿ ಗಣೇಶನನ್ನು ಕೂರಿಸಿ, ಬಾವಿಗಳಲ್ಲಿ ವಿಸರ್ಜನೆ ಮಾಡಬಹುದು. ಆದರೆ, ಜಿಲ್ಲಾಡಳಿತದಿಂದ ವಿಸರ್ಜನೆಗೆ ವ್ಯವಸ್ಥೆ ಮಾಡುವುದಿಲ್ಲ ಎಂದರು.</p>.<p>ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ ಎಂಬ ಆತಂಕ ಸಾರ್ವಜನಿಕರಲ್ಲಿದೆ. ಸೋಂಕು ನಿಯಂತ್ರಣ ಕೈಮೀರಿಲ್ಲ. ಬದಲಾಗಿ, ಪರೀಕ್ಷೆ ಪ್ರಮಾಣ ಹೆಚ್ಚಾಗಿರುವುದರಿಂದ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ ಎಂದು ತಿಳಿಸಿದರು.</p>.<p>ಆರಂಭದಲ್ಲಿ ಪ್ರತಿದಿನ 500 ಪರೀಕ್ಷೆ ಮಾಡಿದಾಗ 100 ಜನರಿಗೆ ಸೋಂಕು ಪತ್ತೆಯಾಗುತ್ತಿತ್ತು. ಈಗ 2,500ಕ್ಕೆ ಹೆಚ್ಚಿಸಿರುವುದರಿಂದ ಪ್ರಮಾಣ ಹೆಚ್ಚಾಗಿದೆ. ಸೋಂಕಿನ ಸರಪಳಿ ತುಂಡರಿಸಲು ಪರೀಕ್ಷಾ ಪ್ರಮಾಣ ಹೆಚ್ಚಿಸಲಾಗಿದೆ ಎಂದರು.</p>.<p>ಕಳೆದ ತಿಂಗಳು ಶೇ 25ರಷ್ಟಿದ್ದ ಪಾಸಿಟಿವ್ ಪ್ರಮಾಣ, ಸದ್ಯ ಶೇ 10ಕ್ಕಿಳಿದಿದೆ. ತಿಂಗಳಾಂತ್ಯಕ್ಕೆ ಸೋಂಕಿನ ಪ್ರಮಾಣವನ್ನು ಶೇ 5ಕ್ಕೆ ತಗ್ಗಿಸುವ ಗುರಿ ಇದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.</p>.<p>ಕಳೆದ ತಿಂಗಳು ಶೇ 50ಕ್ಕಿಂತ ಹೆಚ್ಚು ಸೋಂಕಿರತರಲ್ಲಿ ರೋಗದ ಗುಣಲಕ್ಷಣ ಕಂಡುಬರುತ್ತಿತ್ತು. ಈಗ ಪ್ರಮಾಣ ಶೇ 10ಕ್ಕಿಳಿದಿದೆ. ಐಸಿಯು ಬೆಡ್ಗಳು, ಆಕ್ಸಿಜನ್ ಬೆಡ್ಗಳು ಅಗತ್ಯ ಪ್ರಮಾಣದಲ್ಲಿದ್ದು, ಸಾರ್ವಜನಿಕರು ಭಯ ಪಡಬೇಕಿಲ್ಲ ಎಂದರು.</p>.<p>ಸರ್ಕಾರದ ಮಾರ್ಗಸೂಚಿ ಪ್ರಕಾರ ಕೆಲಸ ನಿರ್ವಹಿಸುವ ಜಾಗ, ಕಚೇರಿ, ಕಾರ್ಖಾನೆಗಳನ್ನು ಸೀಲ್ಡೌನ್ ಮಾಡುವಂತಿಲ್ಲ. ಸೋಂಕು ಪತ್ತೆ ಜಾಗವನ್ನು ಸ್ಯಾನಿಟೈಸ್ ಮಾಡುವುದು ಹಾಗೂ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಕಡ್ಡಾಯವಾಗಿ ಕ್ವಾರಂಟೈನ್ಗೊಳಪಡಿಸಿ ಪರೀಕ್ಷೆಗೊಳಪಡಿಸಾಗುತ್ತಿದೆ. ಜಿಲ್ಲಾಡಳಿತ ತಾರತಮ್ಯ ನೀತಿ ಅನುಸರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>