ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಕ್ರೈಸ್ತ ಸಮುದಾಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಅದಕ್ಕೆ ಬೆಂಬಲವನ್ನು ಕೊಟ್ಟಿಲ್ಲ. ಅಲ್ಲದೆ, ಹಿಂದೂ ಸಂಘಟನೆಗಳು ಹಮ್ಮಿಕೊಂಡಿರುವ ಪ್ರತಿಭಟನೆಗೂ ನಮ್ಮ ವಿರೋಧವಿಲ್ಲ. ಆದರೆ ಪ್ರತಿಭಟನೆಯ ಬ್ಯಾನರ್ನಲ್ಲಿ ಕ್ರೈಸ್ತರ ಶಿಲುಬೆಯನ್ನು ನಿಷೇಧಿಸುವ ಚಿಹ್ನೆ ಹಾಕಿ ಅವಮಾನಿಸಿರುವುದು ಸರಿಯಲ್ಲ. ಶಿಲುಬೆ ಕ್ರೈಸ್ತರ ಧಾರ್ಮಿಕ ಸಂಕೇತವಾಗಿದ್ದು, ಅದರ ಬಗ್ಗೆ ಅಪಾರ ಗೌರವವಿದೆ ಎಂದರು.