ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ 1987ರಿಂದ ರಾಜ್ಯದ ಬುಡಕಟ್ಟು ಸಮುದಾಯಗಳ ಪರವಾಗಿ ದುಡಿಯುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿರುವ ಕೊರಗರು, ಹಸಲರು, ಗೊಂಡ, ಮಲೆಕುಡಿಯ, ಹಕ್ಕಿಪಿಕ್ಕಿ, ಜೇನುಕುರುಬ, ಬೆಟ್ಟಕುರುಬ, ಎರವ ಸೋಲಿಗ, ಡೋಂಗ್ರಿ ಗರಸಿಯಾ ಸಮುದಾಯಗಳನ್ನು ಮೇಲೆತ್ತಲ್ಲು ಶ್ರಮಿಸುತ್ತಿದೆ. ಸಂಸ್ಥೆಯ ಕಾರ್ಯಕ್ಕೆ ಪ್ರತಿಫಲವಾಗಿ ಪ್ರತಿಷ್ಠಿತ ವಿಶ್ವಸಂಸ್ಥೆ ಹ್ಯಾಬಿಟ್ಯಾಟ್ ಪ್ರಶಸ್ತಿ ಸಿಕ್ಕಿದೆ ಎಂದರು.