ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನವು ಆಡಳಿತ ನಿರ್ವಹಣೆ, ವಾಣಿಜ್ಯ, ಆರೋಗ್ಯ ನಿರ್ವಹಣೆ, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ವ್ಯವಹಾರ ವಿಶ್ಲೇಷಣೆ ಮುಂತಾದ ವಿಚಾರಗಳನ್ನು ಮಂಡಿಸಲು ಹಾಗೂ ಚರ್ಚಿಸಲು ಒಂದು ವೇದಿಕೆಯನ್ನು ಕಲ್ಪಿಸಿಕೊಡಲಿದೆ. ಸಂಶೋಧನಾ ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನೆಗಳನ್ನು ಮಂಡಿಸಲು, ಜ್ಞಾನ ವೃದ್ಧಿಸಲು ಹಾಗೂ ಪ್ರಸ್ತುತ ಸಂಶೋಧನೆಯಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಧೈರ್ಯ ತುಂಬುವುದು ಇದರ ಮೂಲ ಉದ್ದೇಶವಾಗಿದೆ ಎಂದರು.