ಕೃಷ್ಣ ದೇವರಿಗೆ ರಾತ್ರಿ ಪೂಜೆ ನಡೆದ ನಂತರ ಉಡುಕು ವಾದ್ಯ, ಸೂರ್ಯವಾದ್ಯ, ನಾದಸ್ವರ, ಸಂಕೀರ್ತನೆ, ಸಂಗೀತ, ಭಾಗವತ ಪುರಾಣಗಳು ಚಂದ್ರಶಾಲೆಯಲ್ಲಿ ನೆರವೇರುತ್ತವೆ. ನಂತರ ದೇವರ ಎದುರಿನ ಮಂಟಪದಲ್ಲಿ ಸ್ವಾಮೀಜಿಯವರು ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡುತ್ತಾರೆ.