ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗದೀಶ್‌ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

Last Updated 20 ಆಗಸ್ಟ್ 2019, 15:42 IST
ಅಕ್ಷರ ಗಾತ್ರ

ಉಡುಪಿಜಿಲ್ಲಾಧಿಕಾರಿಯಾಗಿ ಮಂಗಳವಾರ ಜಿ.ಜಗದೀಶ್ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಕಚೇರಿಯಲ್ಲಿ ಅಧಿಕಾರಿ ಹಸ್ತಾಂತರಿಸಿದರು.

ಜಗದೀಶ್ 2006ರಲ್ಲಿ ಉಡುಪಿಯ ಉಪ ವಿಭಾಗಾಧಿಕಾರಿಯಾಗಿದ್ದರು. ನಂತರ ಸವಣೂರು, ಶಿರಸಿ, ಹಾವೇರಿ ಮೈಸೂರು, ಬೆಂಗಳೂರಿನಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಮತ್ತು ಹಾಸನ ಮತ್ತು ಕೋಲಾರದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು.

ವಿಮಾನದಲ್ಲಿ ಬಂದಿಳಿದ ಡಿಸಿ:ಸೋಮವಾರ ರಾತ್ರಿ ವರ್ಗಾವಣೆ ಆದೇಶ ಹೊರಬೀಳುತ್ತಲೇ ಜಿ.ಜಗದೀಶ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಬಂದು, ಅಲ್ಲಿಂದು ಉಡುಪಿಗೆ ಆಗಮಿಸಿ ಅಧಿಕಾರ ಸ್ವೀಕರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT