<p>ಉ<strong>ಡುಪಿ:</strong> ಪ್ರಕೃತಿಯಲ್ಲಿ ಪ್ರತಿ ವಸ್ತುವಿನಲ್ಲಿರುವ ವೈಶಿಷ್ಟ್ಯವನ್ನು ರಕ್ಷಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪುತ್ತಿಗೆ ಮಠದಲ್ಲಿ ಬುಧವಾರ ಜಾಗೃತಿ ಫೌಂಡೇಷನ್ ಕಾರ್ಕಳದಿಂದ ಪ್ರಕೃತಿ ಸಂರಕ್ಷಣೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸಲು ಸಲುವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದವಾನರವನ ಅಭಿಯಾನ ಹಾಗೂ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಹೂ–ಹಣ್ಣಿನ ಗಿಡಗಳನ್ನು ಹೆಚ್ಚು ಬೆಳೆಸಲು ಒತ್ತು ನೀಡಬೇಕು. ತರಗೆಲೆಗಳನ್ನು ಸುಡದೆ ಗೊಬ್ಬರವಾಗಿಸುವುದರಿಂದ ಜೀವಜಂತುಗಳ ಹುಟ್ಟಿಗೆ ಕಾರಣವಾಗುತ್ತವೆ. ಮನೆಯಲ್ಲಿದ್ದ ಕಸ, ಪ್ರಕೃತಿಯಲ್ಲಿದ್ದರೆ ಕಸವೂ ಆಹಾರವೇ ಎಂದರು.</p>.<p>ನೀಲಾವರದ ಗೋಶಾಲೆಯಲ್ಲಿಯೂ ವಾನರ ವನವನ್ನು ಕಾಣಬಹುದು. ಮಾನವನ ಹಸ್ತಕ್ಷೇಪ ಇಲ್ಲದೆ ಅರಣ್ಯ ಸಂರಕ್ಷಣೆ ಮಾಡಿದರೆ ಪ್ರಾಣಿ-ಪಕ್ಷಿಗಳು ಉಳಿಯುತ್ತವೆ ಎಂದು ಸಲಹೆ ನೀಡಿದರು.</p>.<p>ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ವಾನರ ಪ್ರಿಯ ಕೆಲಸದಿಂದ ರಾಮನ ಪ್ರೀತಿ ಪಡೆಯಬಹುದು. ಪ್ರಾಣಿ, ಪಕ್ಷಿಗಳು ಉಳಿದರೆ ಮತ್ರ ಜಗತ್ತು ಉಳಿಯಲು ಸಾಧ್ಯವಿದೆ. ಎಲ್ಲರೂ ಪ್ರಾಣಿ ಪಕ್ಷಿಗಳ ಉಳಿವಿಗೆ ಸಂಕಲ್ಪ ಮಾಡಬೇಕಿದೆ ಎಂದರು.</p>.<p>ವಾನರಗಳಿಗೆ ನೈಸರ್ಗಿಕ ಹಣ್ಣಿನ ತೋಟ ನಿರ್ಮಾಣ ಮಾಡುವ ಸಂಬಂಧ ಪರಿಸರಾಸಕ್ತ ಸಂಘಟನೆಗಳ ಮೂಲಕ ಸರ್ಕಾರಿ-ಅರೆ ಸರ್ಕಾರಿ, ಎನ್ಜಿಒಗಳ ಸಹಯೋಗದೊಂದಿಗೆ ಮೇ 1ರಿಂದ ಏಳು ತಿಂಗಳ ಅವಧಿಯಲ್ಲಿ ಅಭಿಯಾನ ನಡೆಯಲಿದೆ. ಜ.26ರ ಗಣರಾಜೋತ್ಸವದಂದು ಬಹುಮಾನ ವಿತರಣೆ ನಡೆಯಲಿದೆ.</p>.<p>ಸರ್ಕಾರಿ ಜಾಗ, ರಸ್ತೆಯ ಇಕ್ಕೆಲಗಳಲ್ಲಿ ನೈಸರ್ಗಿಕ ಹಣ್ಣಿನ ಗಿಡಗಳನ್ನು ನೆಡಲು ಅವಕಾಶವಿದ್ದು, ವಿಜೇತರಿಗೆ ಪ್ರಥಮ ಬಹುಮಾನವಾಗಿ ₹ 55000 ಹಾಗೂ ಪ್ರತಿ ಜಿಲ್ಲೆಗೆ ಸಮಾಧಾನಕರ ಬಹುಮಾನ ನೀಡಲಾಗುವುದು. ಗಿಡಗಳನ್ನು ನೆಡುವ ಮೂಲಕ ಅವುಗಳ ಪೋಷಣೆ ಮಾಡಿ ಬೆಳೆಸುವುದು ಅಗತ್ಯ ಎಂದು ಶಿಕ್ಷಕ ರಾಜೇಂದ್ರ ಭಟ್ ಮಾಹಿತಿ ನೀಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಜಾಗೃತಿ ಫೌಂಡೇಶನ್ ಅಧ್ಯಕ್ಷ ಆನಂದರಾಯ ನಾಯಕ್, ಸಂಚಾಲಕ ಸಿಯಾ ಸಂತೋಷ್ ನಾಯಕ್, ಕಾರ್ಯಾಧ್ಯಕ್ಷೆ ರಮಿತಾ ಶೈಲೇಂದ್ರ, ಗೌರವ ಸಲಹೆಗಾರ ಗುರ್ಮೆ ಸುರೇಶ್ ಶೆಟ್ಟಿ, ಪಿ.ಸಂತೋಷ್ ಶೆಟ್ಟಿ ತೆಂಕರಗುತ್ತು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉ<strong>ಡುಪಿ:</strong> ಪ್ರಕೃತಿಯಲ್ಲಿ ಪ್ರತಿ ವಸ್ತುವಿನಲ್ಲಿರುವ ವೈಶಿಷ್ಟ್ಯವನ್ನು ರಕ್ಷಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪುತ್ತಿಗೆ ಮಠದಲ್ಲಿ ಬುಧವಾರ ಜಾಗೃತಿ ಫೌಂಡೇಷನ್ ಕಾರ್ಕಳದಿಂದ ಪ್ರಕೃತಿ ಸಂರಕ್ಷಣೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸಲು ಸಲುವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದವಾನರವನ ಅಭಿಯಾನ ಹಾಗೂ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಹೂ–ಹಣ್ಣಿನ ಗಿಡಗಳನ್ನು ಹೆಚ್ಚು ಬೆಳೆಸಲು ಒತ್ತು ನೀಡಬೇಕು. ತರಗೆಲೆಗಳನ್ನು ಸುಡದೆ ಗೊಬ್ಬರವಾಗಿಸುವುದರಿಂದ ಜೀವಜಂತುಗಳ ಹುಟ್ಟಿಗೆ ಕಾರಣವಾಗುತ್ತವೆ. ಮನೆಯಲ್ಲಿದ್ದ ಕಸ, ಪ್ರಕೃತಿಯಲ್ಲಿದ್ದರೆ ಕಸವೂ ಆಹಾರವೇ ಎಂದರು.</p>.<p>ನೀಲಾವರದ ಗೋಶಾಲೆಯಲ್ಲಿಯೂ ವಾನರ ವನವನ್ನು ಕಾಣಬಹುದು. ಮಾನವನ ಹಸ್ತಕ್ಷೇಪ ಇಲ್ಲದೆ ಅರಣ್ಯ ಸಂರಕ್ಷಣೆ ಮಾಡಿದರೆ ಪ್ರಾಣಿ-ಪಕ್ಷಿಗಳು ಉಳಿಯುತ್ತವೆ ಎಂದು ಸಲಹೆ ನೀಡಿದರು.</p>.<p>ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ವಾನರ ಪ್ರಿಯ ಕೆಲಸದಿಂದ ರಾಮನ ಪ್ರೀತಿ ಪಡೆಯಬಹುದು. ಪ್ರಾಣಿ, ಪಕ್ಷಿಗಳು ಉಳಿದರೆ ಮತ್ರ ಜಗತ್ತು ಉಳಿಯಲು ಸಾಧ್ಯವಿದೆ. ಎಲ್ಲರೂ ಪ್ರಾಣಿ ಪಕ್ಷಿಗಳ ಉಳಿವಿಗೆ ಸಂಕಲ್ಪ ಮಾಡಬೇಕಿದೆ ಎಂದರು.</p>.<p>ವಾನರಗಳಿಗೆ ನೈಸರ್ಗಿಕ ಹಣ್ಣಿನ ತೋಟ ನಿರ್ಮಾಣ ಮಾಡುವ ಸಂಬಂಧ ಪರಿಸರಾಸಕ್ತ ಸಂಘಟನೆಗಳ ಮೂಲಕ ಸರ್ಕಾರಿ-ಅರೆ ಸರ್ಕಾರಿ, ಎನ್ಜಿಒಗಳ ಸಹಯೋಗದೊಂದಿಗೆ ಮೇ 1ರಿಂದ ಏಳು ತಿಂಗಳ ಅವಧಿಯಲ್ಲಿ ಅಭಿಯಾನ ನಡೆಯಲಿದೆ. ಜ.26ರ ಗಣರಾಜೋತ್ಸವದಂದು ಬಹುಮಾನ ವಿತರಣೆ ನಡೆಯಲಿದೆ.</p>.<p>ಸರ್ಕಾರಿ ಜಾಗ, ರಸ್ತೆಯ ಇಕ್ಕೆಲಗಳಲ್ಲಿ ನೈಸರ್ಗಿಕ ಹಣ್ಣಿನ ಗಿಡಗಳನ್ನು ನೆಡಲು ಅವಕಾಶವಿದ್ದು, ವಿಜೇತರಿಗೆ ಪ್ರಥಮ ಬಹುಮಾನವಾಗಿ ₹ 55000 ಹಾಗೂ ಪ್ರತಿ ಜಿಲ್ಲೆಗೆ ಸಮಾಧಾನಕರ ಬಹುಮಾನ ನೀಡಲಾಗುವುದು. ಗಿಡಗಳನ್ನು ನೆಡುವ ಮೂಲಕ ಅವುಗಳ ಪೋಷಣೆ ಮಾಡಿ ಬೆಳೆಸುವುದು ಅಗತ್ಯ ಎಂದು ಶಿಕ್ಷಕ ರಾಜೇಂದ್ರ ಭಟ್ ಮಾಹಿತಿ ನೀಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಜಾಗೃತಿ ಫೌಂಡೇಶನ್ ಅಧ್ಯಕ್ಷ ಆನಂದರಾಯ ನಾಯಕ್, ಸಂಚಾಲಕ ಸಿಯಾ ಸಂತೋಷ್ ನಾಯಕ್, ಕಾರ್ಯಾಧ್ಯಕ್ಷೆ ರಮಿತಾ ಶೈಲೇಂದ್ರ, ಗೌರವ ಸಲಹೆಗಾರ ಗುರ್ಮೆ ಸುರೇಶ್ ಶೆಟ್ಟಿ, ಪಿ.ಸಂತೋಷ್ ಶೆಟ್ಟಿ ತೆಂಕರಗುತ್ತು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>