<p><strong>ಉಡುಪಿ: </strong>ಭೂಮಿಗೆ ಬಿದ್ದ ಮಳೆಯ ನೀರನ್ನು ಸಂರಕ್ಷಿಸಿ ಬಳಸಿಕೊಂಡರೆ ಜಲಕ್ಷಾಮ ಎದುರಿಸುವ ಸ್ಥಿತಿ ಬರುವುದಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಸಿಂಧೂ ಬಿ.ರೂಪೇಶ್ ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಪಂಚಾಯಿತಿ, ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಜಲಾಮೃತ ವರ್ಷ ಕಾರ್ಯಕ್ರಮದಡಿಯಲ್ಲಿ ಬುಧವಾರ ಕಲ್ಯಾಣಪುರದ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಳವಡಿಸಿರುವ ಮಳೆ ನೀರು ಸಂಗ್ರಹ ಘಟಕ ಹಾಗೂ ಮಳೆ ನೀರು ತಡೆಹಿಡಿಯುವ ಘಟಕ ಉದ್ಘಾಟಿಸಿ ಮಾತನಾಡಿದರು.</p>.<p>ಕರಾವಳಿ ಭಾಗದಲ್ಲಿ ಬೀಳುವ ಮಳೆಯ ನೀರನ್ನು ಹಿಡಿದಿಟ್ಟುಕೊಳ್ಳದ ಪರಿಣಾಮ ಶೇ 90ರಷ್ಟು ನೀರು<br />ಸಮುದ್ರದ ಪಾಲಾಗುತ್ತಿದೆ. ಪರಿಣಾಮ ಬೇಸಗೆಯಲ್ಲಿ ಜಲಕ್ಷಾಮ ಎದುರಾಗುತ್ತಿದೆ. ಪ್ರತಿಯೊಬ್ಬರೂ ಮಳೆ ನೀರು ಸಂಗ್ರಹ ವಿಧಾನ ಅಳವಡಿಸಿಕೊಂಡರೆ ನೀರಿನ ಸಮಸ್ಯೆ ಇರುವುದಿಲ್ಲ. ಟ್ಯಾಂಕರ್ ನೀರಿಗೆ ಮೊರೆ ಹೋಗಬೇಕಿಲ್ಲ ಎಂದರು.</p>.<p>ಕಳೆದ ವರ್ಷ ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿತ್ತು. ಆದರೂ ಈ ಬಾರಿ ಏಪ್ರಿಲ್, ಮೇನಲ್ಲಿ ನೀರಿನ ಅಭಾವ ಎದುರಾಗಿತ್ತು. ಗಂಭೀರ ಸಮಸ್ಯೆ ಇರುವ ಕಡೆಗಳಲ್ಲಿ ಟ್ಯಾಂಕರ್ಗಳಲ್ಲಿ ನೀರು ಪೂರೈಸಲಾಗಿದೆ. ಜಲಮೂಲ ಖಾಲಿಯಾದರೆ ಟ್ಯಾಂಕರ್ ನೀರು ಪೂರೈಸಲೂ ಸಾಧ್ಯವಿಲ್ಲ. ಹಾಗಾಗಿ,ಮಳೆ ನೀರನ್ನು ಸಂಗ್ರಹಿಸಿಕೊಳ್ಳಬೇಕಿರುವುದು ನಾಗರಿಕರಜವಾಬ್ದಾರಿ ಎಂದರು.</p>.<p>ಮನೆ, ಅಪಾರ್ಟ್ಮೆಂಟ್, ಕಚೇರಿಗಳಲ್ಲಿಮಳೆ ನೀರು ಸಂಗ್ರಹ ಘಟಕ ಅಳವಡಿಸಿಕೊಳ್ಳಬೇಕು. ನೀರಿನ ಅಗತ್ಯತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಪನ್ಮೂಲ ವ್ಯಕ್ತಿ ಜೋಸೆಫ್ ಜಿ.ಎಂ.ರೆಬೆಲ್ಲೊಮಾತನಾಡಿ, ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ಜನರಿಗೆ ಮಳೆಗಾಲದ ಅನುಭವವಾಗುತ್ತಿಲ್ಲ. ಬಿಸಿಲಿನ ವಾತಾವರಣ ಹೆಚ್ಚುತ್ತಿದ್ದು ಅಂತರ್ಜಲ ಮಟ್ಟ ಕುಸಿದಿದೆ.ಅರಣ್ಯ ಸಂಪತ್ತು ನಾಶವಾಗುತ್ತಿದೆ. ಪ್ರಕೃತಿ ಉಳಿಸುವ ನಿಟ್ಟಿನಲ್ಲಿ ಯುವಸಮುದಾಯ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಕಾರಿ ಎ.ಶ್ರೀನಿವಾಸ್ ರಾವ್ ಜಲಜಾಗೃತಿ ಮಾಹಿತಿ ಪತ್ರ ಬಿಡುಗಡೆ ಮಾಡಿದರು. ಮಿಲಾಗ್ರಿಸ್ ಶಿಕ್ಷಣ ಸಂಸ್ಥೆ ಸಂಚಾಲಕರಾದ ಲಾರೆನ್ಸ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು.</p>.<p>ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ಲ್ಯಾನ್ಸಿ ಫೆರ್ನಾಂಡಿಸ್ ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೀರಾ ಡಿಸಿಲ್ವ ಉಪಸ್ಥಿತರಿದ್ದರು. ಸಹಶಿಕ್ಷಕ ಪ್ರಶಾಂತ್ ಲೋಪೆಸ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಭೂಮಿಗೆ ಬಿದ್ದ ಮಳೆಯ ನೀರನ್ನು ಸಂರಕ್ಷಿಸಿ ಬಳಸಿಕೊಂಡರೆ ಜಲಕ್ಷಾಮ ಎದುರಿಸುವ ಸ್ಥಿತಿ ಬರುವುದಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಸಿಂಧೂ ಬಿ.ರೂಪೇಶ್ ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಪಂಚಾಯಿತಿ, ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಜಲಾಮೃತ ವರ್ಷ ಕಾರ್ಯಕ್ರಮದಡಿಯಲ್ಲಿ ಬುಧವಾರ ಕಲ್ಯಾಣಪುರದ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಳವಡಿಸಿರುವ ಮಳೆ ನೀರು ಸಂಗ್ರಹ ಘಟಕ ಹಾಗೂ ಮಳೆ ನೀರು ತಡೆಹಿಡಿಯುವ ಘಟಕ ಉದ್ಘಾಟಿಸಿ ಮಾತನಾಡಿದರು.</p>.<p>ಕರಾವಳಿ ಭಾಗದಲ್ಲಿ ಬೀಳುವ ಮಳೆಯ ನೀರನ್ನು ಹಿಡಿದಿಟ್ಟುಕೊಳ್ಳದ ಪರಿಣಾಮ ಶೇ 90ರಷ್ಟು ನೀರು<br />ಸಮುದ್ರದ ಪಾಲಾಗುತ್ತಿದೆ. ಪರಿಣಾಮ ಬೇಸಗೆಯಲ್ಲಿ ಜಲಕ್ಷಾಮ ಎದುರಾಗುತ್ತಿದೆ. ಪ್ರತಿಯೊಬ್ಬರೂ ಮಳೆ ನೀರು ಸಂಗ್ರಹ ವಿಧಾನ ಅಳವಡಿಸಿಕೊಂಡರೆ ನೀರಿನ ಸಮಸ್ಯೆ ಇರುವುದಿಲ್ಲ. ಟ್ಯಾಂಕರ್ ನೀರಿಗೆ ಮೊರೆ ಹೋಗಬೇಕಿಲ್ಲ ಎಂದರು.</p>.<p>ಕಳೆದ ವರ್ಷ ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿತ್ತು. ಆದರೂ ಈ ಬಾರಿ ಏಪ್ರಿಲ್, ಮೇನಲ್ಲಿ ನೀರಿನ ಅಭಾವ ಎದುರಾಗಿತ್ತು. ಗಂಭೀರ ಸಮಸ್ಯೆ ಇರುವ ಕಡೆಗಳಲ್ಲಿ ಟ್ಯಾಂಕರ್ಗಳಲ್ಲಿ ನೀರು ಪೂರೈಸಲಾಗಿದೆ. ಜಲಮೂಲ ಖಾಲಿಯಾದರೆ ಟ್ಯಾಂಕರ್ ನೀರು ಪೂರೈಸಲೂ ಸಾಧ್ಯವಿಲ್ಲ. ಹಾಗಾಗಿ,ಮಳೆ ನೀರನ್ನು ಸಂಗ್ರಹಿಸಿಕೊಳ್ಳಬೇಕಿರುವುದು ನಾಗರಿಕರಜವಾಬ್ದಾರಿ ಎಂದರು.</p>.<p>ಮನೆ, ಅಪಾರ್ಟ್ಮೆಂಟ್, ಕಚೇರಿಗಳಲ್ಲಿಮಳೆ ನೀರು ಸಂಗ್ರಹ ಘಟಕ ಅಳವಡಿಸಿಕೊಳ್ಳಬೇಕು. ನೀರಿನ ಅಗತ್ಯತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಪನ್ಮೂಲ ವ್ಯಕ್ತಿ ಜೋಸೆಫ್ ಜಿ.ಎಂ.ರೆಬೆಲ್ಲೊಮಾತನಾಡಿ, ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ಜನರಿಗೆ ಮಳೆಗಾಲದ ಅನುಭವವಾಗುತ್ತಿಲ್ಲ. ಬಿಸಿಲಿನ ವಾತಾವರಣ ಹೆಚ್ಚುತ್ತಿದ್ದು ಅಂತರ್ಜಲ ಮಟ್ಟ ಕುಸಿದಿದೆ.ಅರಣ್ಯ ಸಂಪತ್ತು ನಾಶವಾಗುತ್ತಿದೆ. ಪ್ರಕೃತಿ ಉಳಿಸುವ ನಿಟ್ಟಿನಲ್ಲಿ ಯುವಸಮುದಾಯ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಕಾರಿ ಎ.ಶ್ರೀನಿವಾಸ್ ರಾವ್ ಜಲಜಾಗೃತಿ ಮಾಹಿತಿ ಪತ್ರ ಬಿಡುಗಡೆ ಮಾಡಿದರು. ಮಿಲಾಗ್ರಿಸ್ ಶಿಕ್ಷಣ ಸಂಸ್ಥೆ ಸಂಚಾಲಕರಾದ ಲಾರೆನ್ಸ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು.</p>.<p>ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ಲ್ಯಾನ್ಸಿ ಫೆರ್ನಾಂಡಿಸ್ ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೀರಾ ಡಿಸಿಲ್ವ ಉಪಸ್ಥಿತರಿದ್ದರು. ಸಹಶಿಕ್ಷಕ ಪ್ರಶಾಂತ್ ಲೋಪೆಸ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>