‘ಬಸ್ಗಳ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ’
ತಾಲ್ಲೂಕು ಮಟ್ಟದಲ್ಲಿ ಜನರ ಸಮಸ್ಯೆ ಆಲಿಸಿ ಖುದ್ದಾಗಿ ಪರಿಹಾರ ನೀಡುವ ಕಾರ್ಯಕ್ರಮ ಜನಸ್ಪಂದನ. ಸರ್ಕಾರದ ಯೋಜನೆಗಳು ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪುವಂತಾಗಬೇಕು. ಅವುಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಜಿಲ್ಲೆಯಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಗಾಳಿ-ಮಳೆಯಿಂದ ಬಹಳಷ್ಟು ನಷ್ಟ ಉಂಟಾಗಿದ್ದು ಶೀಘ್ರ ಸರ್ಕಾರ ಪರಿಹಾರ ನೀಡಬೇಕು ಎಂದ ಅವರು ಬಸ್ಗಳ ಸಮಸ್ಯೆಯಿಂದಾಗಿ ಸಾರ್ವಜನಿಕರು ಪ್ರತಿನಿತ್ಯ ಪರದಾಡುವಂತಾಗಿದ್ದು ಬಸ್ಗಳ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.