ನೇಮಕವಾದ ಬೆನ್ನಲ್ಲೇ ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಸೇವೆ ಸಲ್ಲಿಸಲು ರಾಜ್ಯ ಸರ್ಕಾರ ಉತ್ತಮ ಅವಕಾಶ ನೀಡಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಆಯೋಗಕ್ಕೆ ಸಲ್ಲಿಕೆಯಾಗಿರುವ ವರದಿಗಳನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಆಯೋಗಕ್ಕೆ ನೇಮಕವಾಗಿರುವ ಹಿಂದಿನ ಅಧ್ಯಕ್ಷರ ಜತೆಯೂ ಚರ್ಚಿಸಿ ಸಲಹೆಗಳನ್ನು ಪಡೆಯುವುದಾಗಿ’ ಎಂದು ತಿಳಿಸಿದರು.