ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷದಿಂದ ಯಾವ ತೊಂದರೆಯೂ ಆಗಿಲ್ಲ. ಆಕಸ್ಮಿಕ ಘಟನೆಗೆ ಬಲಿಯಾಗಿದ್ದು, ಅವರ ಬಗ್ಗೆ ಅನುಕಂಪ ಇದೆ. ಜಾರಕಿಹೊಳಿ ಪ್ರಕರಣ ಕಾನೂನು ಹಾಗೂ ನೈತಿಕತೆಯ ಚೌಕಟ್ಟಿನ ವ್ಯಾಪ್ತಿಗೊಳಪಡಲಿದ್ದು, ನೈತಿಕ ಹೊಣೆಹೊತ್ತು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಕಾನೂನು ಹೋರಾಟಕೂಡನಡೆಯುತ್ತಿದೆ.ಒಪ್ಪಿತ ಲೈಂಗಿಕ ಕ್ರಿಯೆ ತಪ್ಪಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ವಿಡಿಯೋದಲ್ಲಿ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಎಂಬ ಭಾವನೆ ವ್ಯಕ್ತವಾಗುತ್ತದೆ. ಪ್ರಕರಣದಲ್ಲಿ ಜಾರಕಿಹೊಳಿ ಅವರಿಗೆ ಶಿಕ್ಷೆ ಆಗಲಾರದು ಎಂದು ಮಾಧುಸ್ವಾಮಿ ಅಭಿಪ್ರಾಯಪಟ್ಟರು.