<p><strong>ಉಡುಪಿ: </strong>ಬಯಲುಸೀಮೆಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲು ಇನ್ನೂ ಎರಡು ವರ್ಷ ಬೇಕಾಗಬಹುದು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.</p>.<p>ಭಾನುವಾರ ಕಕ್ಕುಂಜೆಯಲ್ಲಿ ‘ಹಡಿಲುಭೂಮಿ ಕೃಷಿ ಆಂದೋಲನ’ಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಚಿಕ್ಕಬಳ್ಳಾಪುರ ಹಾಗೂ ತುಮಕೂರು ನಡುವಿನ ಭೈರಗೊಂಡ್ಲ ಹಳ್ಳಿಯ ಬಳಿ ಅಣೆಕಟ್ಟು ನಿರ್ಮಾಣಕ್ಕೆ 5,500 ಎಕರೆ ಭೂಮಿ ಅಗತ್ಯವಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ತೊಡಕಾಗಿದೆ ಎಂದರು.</p>.<p>ತುಮಕೂರು ಜಿಲ್ಲೆಯಲ್ಲಿ ಭೂಮಿಯ ಮಾರುಕಟ್ಟೆ ಮೌಲ್ಯ ಬಹಳ ಕಡಿಮೆ ಇದ್ದರೆ, ದೊಡ್ಡಬಳ್ಳಾಪುರದಲ್ಲಿ ಹೆಚ್ಚಾಗಿದೆ. ಈ ಕಾರಣಕ್ಕೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ರೈತರು ಎತ್ತಿನಹೊಳೆ ಯೋಜನೆಗೆ ಭೂಮಿ ಬಿಟ್ಟುಕೊಡಲು ಒಪ್ಪುತ್ತಿಲ್ಲ ಎಂದರು.</p>.<p>ರೈತರಿಗೆ ಭೂ ಪರಿಹಾರ ನೀಡಲು ಸಮಸ್ಯೆ ಇಲ್ಲ. ಭೂಮಿಯ ಮಾರುಕಟ್ಟೆ ಮೌಲ್ಯದ ನಾಲ್ಕು ಪಟ್ಟು ಮಾತ್ರ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶವಿದ್ದು, ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ. ಹಾಗಾಗಿ, ಭೂಮಿ ಪರಿಹಾರ ನೀಡಲು ಪರ್ಯಾಯ ಯೋಜನೆ ಮಾಡಲಾಗುತ್ತಿದೆ. ಎತ್ತಿನಹೊಳೆ ಯೋಜನೆ ವ್ಯಾಪ್ತಿಯ ಮೂರು ಜಿಲ್ಲೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, 2 ವರ್ಷಗಳಲ್ಲಿ ನೀರು ಹರಿಯಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ನಾಟಿ ಮಾಡಿದ ಮಾಧುಸ್ವಾಮಿ:</strong></p>.<p>ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಕಕ್ಕುಂಜೆಯಲ್ಲಿ ಕೆಸರು ಗದ್ದೆಗಿಳಿದು ನಾಟಿ ಮಾಡಿದರು. ಸಚಿವರಿಗೆ ಶಾಸಕ ರಘುಪತಿ ಭಟ್ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಬಯಲುಸೀಮೆಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲು ಇನ್ನೂ ಎರಡು ವರ್ಷ ಬೇಕಾಗಬಹುದು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.</p>.<p>ಭಾನುವಾರ ಕಕ್ಕುಂಜೆಯಲ್ಲಿ ‘ಹಡಿಲುಭೂಮಿ ಕೃಷಿ ಆಂದೋಲನ’ಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಚಿಕ್ಕಬಳ್ಳಾಪುರ ಹಾಗೂ ತುಮಕೂರು ನಡುವಿನ ಭೈರಗೊಂಡ್ಲ ಹಳ್ಳಿಯ ಬಳಿ ಅಣೆಕಟ್ಟು ನಿರ್ಮಾಣಕ್ಕೆ 5,500 ಎಕರೆ ಭೂಮಿ ಅಗತ್ಯವಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ತೊಡಕಾಗಿದೆ ಎಂದರು.</p>.<p>ತುಮಕೂರು ಜಿಲ್ಲೆಯಲ್ಲಿ ಭೂಮಿಯ ಮಾರುಕಟ್ಟೆ ಮೌಲ್ಯ ಬಹಳ ಕಡಿಮೆ ಇದ್ದರೆ, ದೊಡ್ಡಬಳ್ಳಾಪುರದಲ್ಲಿ ಹೆಚ್ಚಾಗಿದೆ. ಈ ಕಾರಣಕ್ಕೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ರೈತರು ಎತ್ತಿನಹೊಳೆ ಯೋಜನೆಗೆ ಭೂಮಿ ಬಿಟ್ಟುಕೊಡಲು ಒಪ್ಪುತ್ತಿಲ್ಲ ಎಂದರು.</p>.<p>ರೈತರಿಗೆ ಭೂ ಪರಿಹಾರ ನೀಡಲು ಸಮಸ್ಯೆ ಇಲ್ಲ. ಭೂಮಿಯ ಮಾರುಕಟ್ಟೆ ಮೌಲ್ಯದ ನಾಲ್ಕು ಪಟ್ಟು ಮಾತ್ರ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶವಿದ್ದು, ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ. ಹಾಗಾಗಿ, ಭೂಮಿ ಪರಿಹಾರ ನೀಡಲು ಪರ್ಯಾಯ ಯೋಜನೆ ಮಾಡಲಾಗುತ್ತಿದೆ. ಎತ್ತಿನಹೊಳೆ ಯೋಜನೆ ವ್ಯಾಪ್ತಿಯ ಮೂರು ಜಿಲ್ಲೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, 2 ವರ್ಷಗಳಲ್ಲಿ ನೀರು ಹರಿಯಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ನಾಟಿ ಮಾಡಿದ ಮಾಧುಸ್ವಾಮಿ:</strong></p>.<p>ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಕಕ್ಕುಂಜೆಯಲ್ಲಿ ಕೆಸರು ಗದ್ದೆಗಿಳಿದು ನಾಟಿ ಮಾಡಿದರು. ಸಚಿವರಿಗೆ ಶಾಸಕ ರಘುಪತಿ ಭಟ್ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>