ಕುಂದಾಪುರ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಮಾತನಾಡಿ, ‘ಅಪರೂಪದ ಹಾಗೂ ಅಳವಿನಂಚಿನಲ್ಲಿರುವ ಪ್ರಾಣಿ, ಪಕ್ಷಿ, ಸಸ್ಯ ಪ್ರಭೇದಗಳನ್ನು ರಕ್ಷಿಸಿ, ಜೀವವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಾಗಿದೆ. ಸಾವಿರಾರು ಜೀವ ತಳಿಗಳು ವಿನಾಶದ ಅಂಚಿನಲ್ಲಿದ್ದು, ಅವುಗಳನ್ನು ಉಳಿಸಬೇಕಿದೆ. ಪ್ರಕೃತಿ ಸಮತೋಲನಕ್ಕೆ ಎಲ್ಲ ಜೀವರಾಶಿಗಳ ರಕ್ಷಣೆ ಅಗತ್ಯ. ಪ್ರಕೃತಿ ಮನುಷ್ಯನಿಗೆ ಅತ್ಯಮೂಲ್ಯವಾದ ವರದಾನಗಳನ್ನು ನೀಡಿದೆ’ ಎಂದರು.